ಗೋರಕ್ಷಣೆಗೆ ಬೆಂಬಲವಿದೆ; ಕಾನೂನು ಉಲ್ಲಂಘನೆಗಲ್ಲ ಎಂದ ಸಚಿವ ಗಡ್ಕರಿ
Team Udayavani, May 22, 2017, 11:56 AM IST
ಹೊಸದಿಲ್ಲಿ: “ಗೋರಕ್ಷಣೆ ಬೆಂಬಲಿಸುತ್ತೇವೆ. ಆದರೆ ಅದರ ಹೆಸರಲ್ಲಿ ನಡೆಯುವ ಕಾನೂನು ಉಲ್ಲಂಘನೆ ಕೆಲಸಗಳನ್ನಲ್ಲ.’ ಹೀಗಂತ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ದಿಲ್ಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಟುಡೇ ಸಂಪಾದಕರ ಸಮ್ಮೇಳನದಲ್ಲಿ ಮಾತನಾಡುತ್ತಾ ನಿತಿನ್ ಗಡ್ಕರಿ, “ನಾವು ಗೋರಕ್ಷಣೆ ಬೆಂಬಲಿಸುತ್ತೇವೆ. ಗೋಹತ್ಯೆ ಮಾಡಬಾರದು ಎಂಬ ನಂಬಿಕೆ ನಮ್ಮ ಪಕ್ಷದ್ದು. ಆದರೆ ಇದೀಗ ಗೋರಕ್ಷಣೆ ಹೆಸರಲ್ಲಿ ಗೋರಕ್ಷಕರು ನಡೆಸುತ್ತಿರುವ ಕಾರ್ಯಕ್ಕೆ, ಕಾನೂನು ಕೈಗೆತ್ತಿಕೊಳ್ಳುವ ಕ್ರಮಕ್ಕೆ ನಮ್ಮ ಸಚಿವರದ್ದಾಗಲಿ, ನಮ್ಮ ಪಕ್ಷದ್ದಾಗಲಿ, ಸರಕಾರದ್ದಾಗಲಿ ಬೆಂಬಲವಿಲ್ಲ. ಕಾನೂನು ಕೈಗೆತ್ತಿಕೊಳ್ಳುವುದಕ್ಕೆ ಸಮ್ಮತಿ ಇಲ್ಲ’ ಎಂದು ಹೇಳಿದ್ದಾರೆ.
“ಕಾನೂನು ಕೈಗೆತ್ತಿಕೊಂಡು ಸಿಕ್ಕಿಬಿದ್ದಾಗ ಕೆಲವರು ನಾವು ಬಿಜೆಪಿಗೆ ಸೇರಿದ್ದೇವೆ ಎಂದು ಹೇಳುತ್ತಾರೆ. ಅವರು ಬಿಜೆಪಿಗೆ ಸೇರಿದ್ದಾರೋ ಇಲ್ಲವೋ ಎಂಬುದನ್ನೂ ನೋಡದೇ ಬಿಜೆಪಿ ಮೇಲೆ ಆರೋಪ ಹೊರಿಸಲಾಗುತ್ತದೆ. ದಿಲ್ಲಿಯಲ್ಲಿ ನಡೆದ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ತನಗೆ ಸಚಿವ ಮನೇಕಾ ಗಾಂಧಿಯವರ ಪೀಪಲ್ ಫಾರ್ ಅನಿಮಲ್ಸ್ ಸಂಘಟನೆಯೊಂದಿಗೆ ಸಂಪರ್ಕವಿದೆ ಎಂದಿದ್ದ. ಬಳಿಕ ಅದನ್ನು ಅವರು ನಿರಾಕರಿಸಿದ್ದರು’ ಎಂದು ಗಡ್ಕರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್