ದಾಳಿ, ಶೋಧ ಇ.ಡಿ.ಯ ಸಂವಿಧಾನದತ್ತ ಅಧಿಕಾರ: ಸುಪ್ರೀಂಕೋರ್ಟ್‌ನ ಮಹತ್ವದ ಆದೇಶ

ನಿರಾಳವಾದ ಕೇಂದ್ರ ಸರ್ಕಾರ: ತಿರಸ್ಕೃತಗೊಂಡ ಕಾರ್ತಿ ಚಿದು ಸೇರಿ 200ಕ್ಕೂ ಹೆಚ್ಚು ಅರ್ಜಿಗಳು

Team Udayavani, Jul 28, 2022, 6:40 AM IST

ದಾಳಿ, ಶೋಧ ಇ.ಡಿ.ಯ ಸಂವಿಧಾನದತ್ತ ಅಧಿಕಾರ: ಸುಪ್ರೀಂಕೋರ್ಟ್‌ನ ಮಹತ್ವದ ಆದೇಶ

ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಕಾಯ್ದೆ ಅಡಿ ಜಾರಿ ನಿರ್ದೇಶಾನಲಯ (ಇ.ಡಿ)ಕ್ಕೆ ತನಿಖೆ ನಡೆಸುವ, ಆಸ್ತಿ ಮುಟ್ಟುಗೋಲು, ಬಂಧನ, ಶೋಧ ಕಾರ್ಯಾಚರಣೆ ನಡೆಸಲು ಅಧಿಕಾರ ಇದೆ.

ಹೀಗೆಂದು ಸುಪ್ರೀಂಕೋರ್ಟ್‌ನ ನ್ಯಾ.ಎ.ಎಂ.ಖಾನ್ವಿಲ್ಕರ್‌ ನೇತೃತ್ವದ ನ್ಯಾಯಪೀಠ ಬುಧವಾರ ಅಭಿಪ್ರಾಯಪಟ್ಟಿದೆ.

ಈ ಮೂಲಕ ಇ.ಡಿ. ನಡೆಸುವ ದಾಳಿ, ಬಂಧನ ಕ್ರಮ ಪ್ರಶ್ನಿಸಿದ್ದ ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ, ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್‌ ದೇಶ್‌ಮುಖ್‌ ಸೇರಿದಂತೆ 240ಕ್ಕೂ ಹೆಚ್ಚು ಮಂದಿಯ ಅರ್ಜಿಯನ್ನು ನ್ಯಾಯಪೀಠ ತಿರಸ್ಕರಿಸಿದೆ. ಇದರಿಂದಾಗಿ ಕೇಂದ್ರ ಸರ್ಕಾರಕ್ಕೂ ನಿರಾಳವಾಗಿದೆ.

ಕಾಂಗ್ರೆಸ್‌ ಮುಖಂಡರಾಗಿರುವ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರನ್ನು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ವಿಚಾರಣೆ ನಡೆಸಿರುವಂತೆಯೇ ಸುಪ್ರೀಂಕೋರ್ಟ್‌ನ ಈ ಆದೇಶ ಪ್ರಕಟವಾಗಿದೆ.

ಜಗತ್ತಿನಾದ್ಯಂತ ಅಕ್ರಮ ಹಣ ವರ್ಗಾವಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬರುವ ಪ್ರಕರಣಗಳು ವಿತ್ತೀಯ ವ್ಯವಸ್ಥೆಗೆ ಬೆದರಿಕೆಯೇ ಆಗಿದೆ ಎಂದು ನ್ಯಾಯಪೀಠ ಆತಂಕ ವ್ಯಕ್ತಪಡಿಸಿದೆ. ಜಾರಿ ನಿರ್ದೇಶನಾಲಯದ ಪ್ರಕರಣ ಮಾಹಿತಿ ವರದಿ (ಇಸಿಐಆರ್‌)ಯನ್ನು ಪೊಲೀಸರು ದಾಖಲಿಸುವ ಎಫ್ಐಆರ್‌ಗೆ ಹೋಲಿಕೆ ಮಾಡಲಾಗದು. ಅದನ್ನು ಪ್ರತಿ ಪ್ರಕರಣದಲ್ಲಿಯೂ ಆರೋಪಕ್ಕೆ ಗುರಿಯಾಗಿರುವ ವ್ಯಕ್ತಿಗಳ ಜತೆಗೆ ಹಂಚಿಕೊಳ್ಳಬೇಕು ಎಂಬ ಕಡ್ಡಾಯ ನಿಯಮ ಇಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ತನಿಖಾ ಸಂಸ್ಥೆಗೆ ಇರುವ ಅಧಿಕಾರಗಳೆಲ್ಲವೂ ಸಂವಿಧಾನಬದ್ಧವಾಗಿಯೇ ಇದೆಯೇ ಹೊರತು ನಿರಂಕುಶ ವ್ಯವಸ್ಥೆಯದ್ದಲ್ಲ ಎಂದಿದೆ.

ಏಕಪಕ್ಷೀಯ ಅಲ್ಲ:
2002ರಲ್ಲಿ ಜಾರಿಯಾಗಿರುವ ಅಕ್ರಮ ಹಣ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ)ಯ ಅನ್ವಯ ಬಂಧಿತ ವ್ಯಕ್ತಿಗೆ ಜಾಮೀನು ನೀಡಲು ಕಠಿಣ ಷರತ್ತುಗಳನ್ನು ವಿಧಿಸಲು ಅವಕಾಶ ಇದೆ. ಇಂಥ ಕ್ರಮ ಏಕಪಕ್ಷೀಯವಾದದ್ದು ಮತ್ತು ಕಾನೂನಿಗೆ ವಿರೋಧವಾಗಿರುವ ಅಂಶ ಅಲ್ಲ ಎಂದಿತು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಯಾವ ಕಾರಣಕ್ಕಾಗಿ ನಿಗದಿತ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂಬ ಬಗ್ಗೆ ತಿಳಿಸಬೇಕಾಗಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಅಧಿಕಾರ ಇದೆ:
ಪಿಎಂಎಲ್‌ಎ ಕಾಯ್ದೆಯ ಅನ್ವಯ ಜಾರಿ ನಿರ್ದೇಶನಾಲಯಕ್ಕೆ ವ್ಯಕ್ತಿಗಳನ್ನು ಬಂಧಿಸಲು, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು, ನಿಗದಿತ ಸ್ಥಳದಲ್ಲಿ ಶೋಧ ಕಾರ್ಯ ನಡೆಸಲು ಅಧಿಕಾರ ಇದೆ ಎಂದೂ ನ್ಯಾಯಪೀಠ ಹೇಳಿದೆ.

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.