- Tuesday 10 Dec 2019
1984 ಸಿಖ್ ವಿರೋಧಿ ಗಲಭೆ ಕೇಸ್; ಸುಪ್ರೀಂಕೋರ್ಟ್ ನಿಂದ 9 ಮಂದಿ ಖುಲಾಸೆ
Team Udayavani, Apr 30, 2019, 4:34 PM IST
ನವದೆಹಲಿ: ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ 1984ರ ಸಿಖ್ ವಿರೋಧಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಆರೋಪಿಗಳನ್ನು ಸುಪ್ರೀಂಕೋರ್ಟ್ ಮಂಗಳವಾರ ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಪೂರ್ವ ದೆಹಲಿಯ ತ್ರಿಲೋಕ್ ಪುರಿ ಪ್ರದೇಶದಲ್ಲಿ 1984ರ ಸಿಖ್ ವಿರೋಧಿ ಗಲಭೆಗೆ ಕುಮ್ಮಕ್ಕು ನೀಡಿರುವುದಾಗಿ ಆರೋಪಿಸಲಾಗಿದ್ದು, ಇದೀಗ ಸುಪ್ರೀಂಕೋರ್ಟ್ ದೋಷಮುಕ್ತಗೊಳಿಸಿದೆ.
ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಪ್ರಕರಣದ ಕೆಳ ನ್ಯಾಯಾಲಯದ ತೀರ್ಪನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಒಂಬತ್ತು ಮಂದಿ ಆರೋಪಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ವ್ಯಕ್ತಿಗಳ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಮತ್ತು ಇವರೇ ಘಟನೆಗೆ ಕುಮ್ಮಕ್ಕು ನೀಡಿದವರು ಎಂಬುದನ್ನು ನೇರವಾಗಿ ಗುರುತಿಸುವ ಪ್ರತ್ಯಕ್ಷದರ್ಶಿಗಳು ಕೂಡಾ ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ವೇದ್ ಪ್ರಕಾಶ್, ತಾರಾ ಚಾಂದ್, ಸುರೇಂದ್ರ ಸಿಂಗ್(ಕಲ್ಯಾಣ್ ಪುರಿ), ಗಣ್ ಶೇನಾನ್, ಹಬೀಬ್, ರಾಮ್ ಶಿರೋಮಣಿ, ಬ್ರಾಮ್ ಸಿಂಗ್, ಸುಬ್ಬಾರ್ ಸಿಂಗ್ ಮತ್ತು ಸುರೇಂದ್ರ ಮುರ್ಟಿ ಸೇರಿದಂತೆ ಒಂಬತ್ತು ಮಂದಿಯನ್ನು ಕೋರ್ಟ್ ಖುಲಾಸೆಗೊಳಿಸಿದೆ.
ಈ ವಿಭಾಗದಿಂದ ಇನ್ನಷ್ಟು
-
ಗುಡಿವಾಡ: ಈರುಳ್ಳಿ ದರ ಗಗನಕ್ಕೇರಿರುವುದು ಬಳಕೆದಾರರ ಕಣ್ಣೀರಿಗೆ ಕಾರಣವಾಗಿದೆ. ಆದರೆ ಈರುಳ್ಳಿ ಕೊಳ್ಳಲು ಮಾರುಕಟ್ಟೆಗೆ ಹೋದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ...
-
ಹೊಸದಿಲ್ಲಿ: ಭಾರಿ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಇಂದು ಈಶಾನ್ಯ ಭಾರತದ ರಾಜ್ಯಗಳಲ್ಲಿ ಬಂದ್ ಆಚರಿಸಲಾಗುತ್ತಿದೆ. ಈಶಾನ್ಯ...
-
ಹೊಸದಿಲ್ಲಿ: ಜನರ ಬ್ಯಾಂಕ್ ಖಾತೆಯಿಂದ ಕಳ್ಳದಾರಿಯಲ್ಲಿ ಹಣ ಕದಿಯುತ್ತಿದ್ದ ರೋಮಾನಿಯಾದ ಪ್ರಜೆಯೋರ್ವನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೋಮಾನಿಯಾ...
-
ಹೊಸದಿಲ್ಲಿ: ಐವತ್ತು ಮೈಕ್ರಾನ್ಗಳಿಗಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ಬ್ಯಾಗ್ ಬಳಕೆಯಲ್ಲಿ ಬರದಂತೆ ನೋಡಿಕೊಳ್ಳಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ...
-
ಹೊಸದಿಲ್ಲಿ: ಅಯೋಧ್ಯೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮಸೀದಿ ನಿರ್ಮಾಣಕ್ಕೆಂದು ಐದು ಎಕರೆ ಜಮೀನು ನೀಡಬೇಕಾದ ಅಗತ್ಯ ಇಲ್ಲ ಎಂದು ಪ್ರತಿಪಾದಿಸಿ ಹಿಂದೂ ಮಹಾಸಭಾ...
ಹೊಸ ಸೇರ್ಪಡೆ
-
ದಾವಣಗೆರೆ: ಅಂಗವಿಕಲರು ಉತ್ತಮ ಸಾಧನೆಯ ಮೂಲಕ ಯಾರಿಗೇನು ಕಡಿಮೆ ಇಲ್ಲ ಎಂಬುದನ್ನು ತೋರಿಸಬೇಕು ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್...
-
ಬೆಂಗಳೂರು: ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಭಾರಿ ಚರ್ಚೆಯ ನಂತರ ಮಧ್ಯರಾತ್ರಿ...
-
ದಾವಣಗೆರೆ: ರೈತರ ಕುಂದುಕೊರತೆ ಚರ್ಚಿಸಲು ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದ್ದಾರೆ. ಸೋಮವಾರ...
-
ಬೆಂಗಳೂರು: 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಯಾಕೆ ಹಿನ್ನಡೆ ಆಗಿದೆಯೆಂದು ಸಂಪೂರ್ಣವಾಗಿ ಎಲ್ಲರೊಂದಿಗೆ ಹೇಳುತ್ತೇನೆ ಎಂದು ಕಾಂಗ್ರೆಸ್ ನಾಯಕ...
-
ನ್ಯೂಯಾರ್ಕ್: ಅಮೆರಿಕದ ಮಾಜಿ ಬೇಸ್ ಬಾಲ್ ಆಟಗಾರ, ಜಗತ್ತಿನಾದ್ಯಂತ “ಐಸ್ ಬಕೆಟ್ ಚಾಲೆಂಜ್” ಮೂಲಕ ದೇಣಿಗೆ ಸಂಗ್ರಹಿಸಲು ಸ್ಫೂರ್ತಿಯಾಗಿದ್ದ ಪೀಟ್ ಫ್ರೇಟ್ಸ್(34ವರ್ಷ)...