ವಿಚಾರಣೆ ಮುಂದೂಡಿದ್ದ ಸುಪ್ರೀಂ ಕೋರ್ಟ್
Team Udayavani, Jul 24, 2019, 3:00 AM IST
ನವದೆಹಲಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಮಂಗಳವಾರ ಸಂಜೆಯೊಳಗೆ ವಿಶ್ವಾಸಮತ ಸಾಬೀತು ಪ್ರಕ್ರಿಯೆ ಪೂರ್ಣಗೊಳಿಸುತ್ತಾರೆ ಎಂಬ ಸ್ಪೀಕರ್ ರಮೇಶ್ ಕುಮಾರ್ ಅವರು ಸಲ್ಲಿಸಿದ ಟಿಪ್ಪಣಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿ ಸೂಚಿಸಿತ್ತು. ಜತೆಗೆ, ಕೂಡಲೇ ವಿಶ್ವಾಸಮತ ನಿಲುವಳಿಯನ್ನು ಮತಕ್ಕೆ ಹಾಕುವಂತೆ ಸ್ಪೀಕರ್ಗೆ ಸೂಚಿಸಬೇಕು ಎಂದು ಕೋರಿ ಇಬ್ಬರು ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠ ಬುಧವಾರಕ್ಕೆ ಮುಂದೂಡಿತ್ತು.
ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸ್ಪೀಕರ್ ಪರವಾಗಿ ಸಲ್ಲಿಸಿದ ಟಿಪ್ಪಣಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ, ಸ್ಪೀಕರ್ ತಮ್ಮ ಮಾತಿಗೆ ಅನುಗುಣವಾಗಿ ನಡೆದುಕೊಳ್ಳುತ್ತಾರೆಂಬ ನಂಬಿಕೆಯಿದೆ ಎಂದು ಹೇಳಿತ್ತು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿರುವ ಇಬ್ಬರು ಪಕ್ಷೇತರರು, ವಿಶ್ವಾಸಮತ ಸಾಬೀತು ವಿಳಂಬ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸರ್ಕಾರವು ಅಲ್ಪಮತಕ್ಕೆ ಕುಸಿದಿದ್ದರೂ, ವಿಶ್ವಾಸಮತ ಯಾಚನೆ ಪ್ರಕ್ರಿಯೆ ಹೆಸರಲ್ಲಿ ಆಡಳಿತವನ್ನು ಮುಂದುವರಿಸಲಾಗುತ್ತಿದೆ.
ವಿಶ್ವಾಸಮತ ಸಾಬೀತುಪಡಿಸುವಂತೆ 2 ಬಾರಿ ಸಿಎಂಗೆ ರಾಜ್ಯಪಾಲರು ಸೂಚಿಸಿದ್ದರೂ, ಅದಕ್ಕೆ ಮುಖ್ಯಮಂತ್ರಿಗಳು ಕ್ಯಾರೇ ಎಂದಿಲ್ಲ. ಇಂಥ ಬಿಕ್ಕಟ್ಟಿನ ಪರಿಸ್ಥಿತಿಯ ಲಾಭವನ್ನು ಕಾಂಗ್ರೆಸ್ ಪಡೆದುಕೊಳ್ಳುತ್ತಿದ್ದು, ಪೊಲೀಸರು, ಐಎಎಸ್ ಅಧಿಕಾರಿಗಳು ಮತ್ತಿತರ ಅಧಿಕಾರಿಗಳ ವರ್ಗಾವಣೆಯಂಥ ಕೆಲಸವನ್ನು ಮುಂದುವರಿಸಿದೆ. ಹೀಗಾಗಿ, ಕೂಡಲೇ ವಿಶ್ವಾಸಮತ ನಿಲುವಳಿಯನ್ನು ಮತಕ್ಕೆ ಹಾಕುವಂತೆ ಸೂಚಿಸಲು ಸ್ಪೀಕರ್ಗೆ ನಿರ್ದೇಶಿಸಬೇಕು ಎಂದು ಪಕ್ಷೇತರರು ತಮ್ಮ ಅರ್ಜಿಯಲ್ಲಿ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…