ಶಿಕ್ಷೆ ವಿಸ್ತರಣೆ ಮೊದಲು ಅಪರಾಧಿಯ ಅಭಿಪ್ರಾಯ ಆಲಿಸಿ; ಹೈಕೋರ್ಟ್ಗೆ ಸುಪ್ರೀಂಕೋರ್ಟ್ ಸಲಹೆ
Team Udayavani, Aug 20, 2022, 6:50 AM IST
ನವದೆಹಲಿ:ಅಪರಾಧಿಗಳಿಗೆ ನೀಡಲಾಗಿರುವ ಶಿಕ್ಷೆಯನ್ನು ವಿಸ್ತರಿಸುವ ಮುನ್ನ ಅವರಿಗೂ ನೋಟಿಸ್ ನೀಡಿ, ಅವರ ವಾದವನ್ನೂ ಆಲಿಸಬೇಕು ಎಂದು ಹೈಕೋರ್ಟ್ಗಳಿಗೆ ಸುಪ್ರೀಂಕೋರ್ಟ್ ಸಲಹೆ ನೀಡಿದೆ.
ಜತೆಗೆ ಈ ಬಗ್ಗೆ ರಾಜಸ್ಥಾನ ಹೈಕೋರ್ಟ್ ನೀಡಿದ್ದ ಆದೇಶವನ್ನು ವಜಾಗೊಳಿಸಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಜಸ್ಥಾನ ಹೈಕೋರ್ಟ್ ವ್ಯಕ್ತಿಯೊಬ್ಬನಿಗೆ ನೀಡಿದ್ದ ಶಿಕ್ಷೆಯನ್ನು ಆತನ ಜೀವನ ಪರ್ಯಂತದವರೆಗೆ ವಿಸ್ತರಿಸಿ ಆದೇಶ ನೀಡಿತ್ತು.
ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಅಪರಾಧಿಯು ಮೇಲ್ಮನವಿ ಸಲ್ಲಿಸಿದ್ದ. ವಿಚಾರಣೆ ನಡೆಸಿದ ನ್ಯಾ.ಬಿ.ಆರ್.ಗವಾಯಿ ಮತ್ತು ನ್ಯಾ.ಪಿ.ಎಸ್.ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠ, “ಹೈಕೋರ್ಟ್ಗಳು ಈ ಬಗ್ಗೆ ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಳ್ಳಬಹುದಾದರೂ, ಶಿಕ್ಷೆಯನ್ನು ವಿಸ್ತರಿಸುವುದಕ್ಕೂ ಮೊದಲು ಅಪರಾಧಿಗೂ ನೋಟಿಸ್ ನೀಡಬೇಕು.
ಆತನಿಗೂ ತನ್ನ ಪರ ವಾದ ಮಂಡಿಸಲು ಅವಕಾಶ ಕಲ್ಪಿಸಬೇಕು. ಆದರೆ ಈ ಪ್ರಕರಣದಲ್ಲಿ ಆ ರೀತಿ ನಡೆದುಕೊಳ್ಳಲಾಗಿಲ್ಲ’ ಎಂದಿದೆ.
ಹೀಗಾಗಿ, ಶಿಕ್ಷೆಯ ವಿಸ್ತರಣೆ ಸಂದರ್ಭದಲ್ಲಿ ಅಪರಾಧಿಗಳ ಅಭಿಪ್ರಾಯಗಳನ್ನು ಹೈಕೋರ್ಟ್ ಕೇಳಬೇಕು.
ಹೀಗಾಗಿ, ಸದರಿ ವಿಚಾರದಲ್ಲಿ ಅರ್ಜಿದಾರರ ಅಭಿಪ್ರಾಯ ಕೇಳದೆ, ಹೈಕೋರ್ಟ್ ಶಿಕ್ಷೆಯನ್ನು ವಿಸ್ತರಿಸಿದ ಕ್ರಮ ಸರಿಯಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ