ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
Team Udayavani, Nov 25, 2022, 5:10 PM IST
ನವದೆಹಲಿ: ವಿಶೇಷ ವಿವಾಹ ಕಾಯಿದೆಯಡಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲಿಂಗಿ ಜೋಡಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಶುಕ್ರವಾರ (ನವೆಂಬರ್ 25) ನೋಟಿಸ್ ನೀಡಿದೆ.
ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ಅರ್ಜಿಯ ಕುರಿತು ಕೇಂದ್ರ ಮತ್ತು ಅಟಾರ್ನಿ ಜನರಲ್ಗೆ ನೋಟಿಸ್ ಜಾರಿಗೊಳಿಸಿದೆ.
ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವಂತೆ ಇಬ್ಬರು ಸಲಿಂಗಕಾಮಿ ದಂಪತಿಗಳು ಹೈಕೋರ್ಟ್ನ ಮೊರೆ ಹೋಗಿದ್ದು,ಕೇರಳ, ದೆಹಲಿ ಸೇರಿದಂತೆ ವಿವಿಧ ಹೈಕೋರ್ಟ್ಗಳಲ್ಲಿ ಸಲಿಂಗ ವಿವಾಹ ಸಮಸ್ಯೆಗಳಿಗೆ ಸಂಬಂಧಿಸಿದ ವಿವಿಧ ಅರ್ಜಿಗಳು ವಿಚಾರಣೆಯಲ್ಲಿವೆ ಎಂದು ಗಮನಿಸಿದ ಸುಪ್ರೀಂ ಕೋರ್ಟ್, ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ಗೆ ವರ್ಗಾಯಿಸಲು ಸಚಿವಾಲಯವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೇಂದ್ರವು ಹೈಕೋರ್ಟ್ನ ಮುಂದೆ ಹೇಳಿಕೆ ನೀಡಿರುವುದನ್ನು ಪರಿಗಣಿಸಿದೆ.
ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಅವರು ಯಾವುದೇ ಧರ್ಮದ ವಿರೋಧಿಸುತ್ತಿಲ್ಲ. ವಿಶೇಷ ವಿವಾಹ ಕಾಯ್ದೆಯಡಿ ಮಾನ್ಯತೆ ಪಡೆಯಲು ಮಾತ್ರ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ಏತನ್ಮಧ್ಯೆ, ಒಂದು ಅರ್ಜಿಯು ಸಲಿಂಗಿ ಸಮುದಾಯದ ಸದಸ್ಯರು ತಮ್ಮ ಆಯ್ಕೆಯ ಯಾವುದೇ ವ್ಯಕ್ತಿಯನ್ನು ಮದುವೆಯಾಗಲು ಅನುಮತಿಸುವ ಕಾನೂನು ಚೌಕಟ್ಟಿನ ಅನುಪಸ್ಥಿತಿಯನ್ನು ಎತ್ತಿ ಹೇಳಿದೆ. ಅರ್ಜಿಯ ಪ್ರಕಾರ, ದಂಪತಿಗಳು ತಮ್ಮ ಆಯ್ಕೆಯ ಯಾವುದೇ ವ್ಯಕ್ತಿಯನ್ನು ಮದುವೆಯಾಗಲು LGBTQ+(ಸಲಿಂಗಿ) ವ್ಯಕ್ತಿಗಳ ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಲು ಪ್ರಯತ್ನಿಸಬೇಕು ಮತ್ತು ಇದನ್ನು ಶಾಸಕಾಂಗ ಮತ್ತು ಸರಕಾರ ಬಹುಮತದಿಂದ ಅಂಗೀಕರಿಸಬೇಕು ” ಎಂದು ಕೇಳಿಕೊಂಡಿದ್ದಾರೆ.
ಸಲಿಂಗಿಗಳು ಇತರ ನಾಗರಿಕರಿಗೆ ಸಮಾನವಾದ ಮಾನವ, ಮೂಲಭೂತ ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಹೇಳಿದ ಉನ್ನತ ನ್ಯಾಯಾಲಯದ ತೀರ್ಪನ್ನು ಅವರು ಒತ್ತಿ ಹೇಳಿದರು. ಆದಾಗ್ಯೂ, ಈ ದೇಶದಲ್ಲಿ ಮದುವೆಯ ಸಂಸ್ಥೆಯನ್ನು ನಿಯಂತ್ರಿಸುವ ಕಾನೂನು ಚೌಕಟ್ಟು ಪ್ರಸ್ತುತ LGBTQ+ ಸಮುದಾಯದ ಸದಸ್ಯರು ತಮ್ಮ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗಲು ಮತ್ತು ನಮ್ಮ ಸಂವಿಧಾನದ ಅಡಿಯಲ್ಲಿ ಅವರಿಗೆ ಖಾತರಿಪಡಿಸಿದ ಮೂಲಭೂತ ಹಕ್ಕನ್ನು ಜಾರಿಗೊಳಿಸಲು ಅನುಮತಿಸುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ