ಕೋವಿಡ್ ಮರಣ : ಪರಿಹಾರ ಧನ ನೀಡುವ ಬಗ್ಗೆ ನಿಲುವು ತಿಳಿಸಿ : ಕೇಂದ್ರಕ್ಕೆ ಸುಪ್ರೀಮ್ ಸೂಚನೆ
Team Udayavani, May 24, 2021, 8:38 PM IST
ನವ ದೆಹಲಿ : ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಧನ ನೀಡುವುದರ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಮ್ ಕೋರ್ಟ್ ಇಂದು(ಸೋಮವಾರ, ಮೇ 24) ತಿಳಿಸಿದೆ.
ಕೋವಿಡ್ ಸೋಂಕು ತಡೆ ಮತ್ತು ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಮ್ ಕೋರ್ಟ್, ಕೋವಿಡ್ ನಿಂದ ಮೃತಪಟ್ಟವರಿಗೆ ಮರಣ ಪ್ರಮಾಣಪತ್ರವನ್ನು ನಿಡುವ ಕುರಿತು ಏಕ ರೂಪದ ಪ್ರಕ್ರಿಯೆಯನ್ನು ಐಸಿಎಂಆರ್ ನಿರ್ದೇಶನಗಳ ಅನುಸಾರ ಪ್ರಕಟಿಸುವಂತೆ ಸೂಚನೆ ನೀಡಿದೆ.
ಇದನ್ನೂ ಓದಿ : ಉಡುಪಿ : ಬ್ಲಾಕ್ ಫಂಗಸ್ ಚಿಕಿತ್ಸೆಗೆ ಬೆಡ್ಗಳನ್ನು ಮೀಸಲಿಡಿ: ಸಚಿವ ಬೊಮ್ಮಾಯಿ ಸೂಚನೆ
ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಮ್ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಈ ಸೂಚನೆ ನೀಡಿದೆ.
ಕೇಂದ್ರ ವಿಕೋಪ ನಿರ್ವಹಣಾ ನೀತಿ 2005ರ ಅನುಸಾರವಾಗಿ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 4 ಲಕ್ಷ ಪರಿಹಾರ ಒದಗಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು.
ಕೇಂದ್ರ ಸರ್ಕಾರ ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಮರಣ ಪ್ರಮಾಣ ಪತ್ರದಲ್ಲಿ ಏಕರೂಪತೆ ತರದಿದ್ದಲ್ಲಿ ಪರಿಹಾರ ನೀಡಿದರೂ ಫಲಾನುಭವಿಗಳಿಗೆ ದೊರೆಯುವ ಸಾಧ್ಯತೆ ಕಡಿಮೆಯಾಗಲಿದೆ ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಮ್ ಆರ್ ಶಾ ಅವರುಗಳಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಆದ್ದರಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಧನ ನೀಡುವುದ ಬಗ್ಗೆ ತನ್ನ ನಿಲುವು ತಿಳಿಸುವಂತೆ ಸುಪ್ರೀಮ್ ಕೋರ್ಟ್ ಕೇಂದ್ರಕ್ಕೆ ಸೂಚನೆ ನೀಡಿದೆ.
ಇದನ್ನೂ ಓದಿ : ‘ಸಿ.ಡಿಯಲ್ಲಿರುವುದು ನಾನೇ’ ತನಿಖಾಧಿಕಾರಿ ಎದುರು ರಮೇಶ್ ಜಾರಕಿಹೊಳಿ ಹೇಳಿಕೆ..!?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’