ಬಾಬ್ರಿ ಧ್ವಂಸ ಕೇಸು: 9 ತಿಂಗಳಲ್ಲಿ ತೀರ್ಪಿಗೆ ಆದೇಶ
Team Udayavani, Jul 20, 2019, 5:09 AM IST
ನವದೆಹಲಿ: ಅಯೋಧ್ಯೆಯಲ್ಲಿದ್ದ ಬಾಬರಿ ಮಸೀದಿ- ರಾಮಮಂದಿರ ಕಟ್ಟಡ ಧ್ವಂಸ ಪ್ರಕರಣದ ಬಗೆಗಿನ ವಿಚಾರಣೆಯನ್ನು 9 ತಿಂಗಳಲ್ಲಿ ಪೂರ್ತಿಗೊಳಿಸಬೇಕು. ಅದಕ್ಕೆ ಸಂಬಂಧಿಸಿದಂತೆ ನ್ಯಾಯಯಮೂರ್ತಿಗಳ ಸೇವಾವಧಿ ವಿಸ್ತರಿಸುವ ಬಗ್ಗೆ ಸೂಕ್ತ ಆದೇಶವನ್ನು ಉತ್ತರ ಪ್ರದೇಶ ಸರ್ಕಾರ ನಾಲ್ಕು ವಾರಗಳಲ್ಲಿ ಹೊರಡಿಸಬೇಕು ಎಂದು ಸುಪ್ರೀಂ ಕೋರ್ಟ್ನ ನ್ಯಾ.ಆರ್.ಎಫ್.ನಾರಿಮನ್ ಮತ್ತು ನ್ಯಾ.ಸೂರ್ಯಕಾಂತ್ರನ್ನೊಳಗೊಂಡ ನ್ಯಾಯಪೀಠ ಶುಕ್ರವಾರ ಆದೇಶ ನೀಡಿದೆ.
ಸಂವಿಧಾನದಲ್ಲಿ ಉಲ್ಲೇಖವಾಗಿರುವ 142ನೇ ವಿಧಿಯನ್ವಯ ನ್ಯಾಯಪೀಠ ಈ ಆದೇಶ ನೀಡಿದೆ. ಒಂಬತ್ತು ತಿಂಗಳ ಅವಧಿಯಲ್ಲಿ ಕಟ್ಟಡ ಧ್ವಂಸ ಪ್ರಕರಣದ ವಿಚಾರಣೆ ಪೂರ್ತಿಯಾಗಬೇಕು. ಶುಕ್ರವಾರದಿಂದ ಮೊದಲ್ಗೊಂಡ ಆರು ತಿಂಗಳ ಒಳಗಾಗಿ ಪ್ರಾಸಿಕ್ಯೂಷನ್ ಮತ್ತು ಡಿಫೆನ್ಸ್ ಸಾಕ್ಷ್ಯಗಳಿಂದ ಹೇಳಿಕೆ ಪಡೆದು ಪೂರ್ತಿಗೊಳಿಸಬೇಕು. ಜತೆಗೆ ಮೌಖೀಕ ವಾದ ಮಿತಿಗೊಳಿಸಿ, ಲಿಖೀತ ವಾದ ಮಂಡನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆದೇಶ ನೀಡಿದೆ. ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಪಿ. ಯಾದವ್ ಸೆ.30ರಂದು ನಿವೃತ್ತಿಯಾಗುವುದಾಗಿ ಮೇ 25ರಂದು ಪತ್ರ ಬರೆದಿದ್ದರು. ಹೀಗಾಗಿ, ಅವಧಿ ವಿಸ್ತರಿಸುವಂತೆ ಕೋರಿಕೊಂಡಿದ್ದರಿಂದ ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ