ನೂಪುರ್ ಶರ್ಮಾ ಬಂಧನಕ್ಕೆ ಕೋರಿ ಮನವಿ: ಪರಿಗಣಿಸಲು ನಿರಾಕರಿಸಿದ ಸುಪ್ರೀಂ
Team Udayavani, Sep 9, 2022, 4:53 PM IST
ನವದೆಹಲಿ: ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ದ್ವೇಷಪೂರಿತ ಹೇಳಿಕೆ ಮತ್ತು ಮುಸ್ಲಿಂ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ಪೀಠವು, ”ಅರ್ಜಿದಾರರಾದ ವಕೀಲ ಅಬು ಸೋಹೆಲ್ ಅವರ ಮನವಿಯು ನಿರುಪದ್ರವವೆಂದು ತೋರುತ್ತದೆ ಆದರೆ ದೂರಗಾಮಿ ಪರಿಣಾಮಗಳನ್ನು ಹೊಂದಿದೆ ಎಂದು ಹೇಳಿದೆ. ನಂತರ ಸೊಹೆಲ್ ತನ್ನ ಮನವಿಯನ್ನು ಹಿಂಪಡೆದರು.
ದೂರು ನೀಡಿದರೂ ಪೊಲೀಸರು ಶರ್ಮಾ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ವಕೀಲರು ಪ್ರಕರಣದ ತುರ್ತು ವಿಚಾರಣೆಯನ್ನು ಕೋರಿದರು.ಪ್ರವಾದಿ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಶರ್ಮಾ ಅಸಭ್ಯ ಟೀಕೆಗಳನ್ನು ಮಾಡಿದ್ದಾರೆ, ಆದ್ದರಿಂದ ಘಟನೆಯ ಬಗ್ಗೆ “ಸ್ವತಂತ್ರ, ವಿಶ್ವಾಸಾರ್ಹ ಮತ್ತು ನಿಷ್ಪಕ್ಷಪಾತ ತನಿಖೆ” ಗಾಗಿ ನಿರ್ದೇಶನಗಳನ್ನು ಕೋರಿದ್ದಾರೆ, ಅದು ಅವರನ್ನು ತಕ್ಷಣದ ಬಂಧನವನ್ನು ಖಚಿತಪಡಿಸುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿತ್ತು.
ಶರ್ಮಾ ಅವರ ಹೇಳಿಕೆಗಳು ಸಂವಿಧಾನದ 14, 15, 21, 26 ಮತ್ತು 29 ನೇ ವಿಧಿ ಮತ್ತು ಇತರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೇಳಿ ತತ್ ಕ್ಷಣ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಕೋರಲಾಗಿತ್ತು.
“ಶರ್ಮಾ ಅವರ ಅನಪೇಕ್ಷಿತ ಮಾತುಗಳು ದೇಶ ಮತ್ತು ಜಗತ್ತಿನಾದ್ಯಂತ ಭಾರಿ ಅಶಾಂತಿ ಮತ್ತು ಕೋಲಾಹಲವನ್ನು ಉಂಟುಮಾಡಿದೆ ಮತ್ತು ನಮ್ಮ ಮಹಾನ್ ರಾಷ್ಟ್ರದ ಪ್ರತಿಷ್ಠೆಗೆ ಕಳಂಕ ತಂದಿದೆ” ಎಂದು ವಕೀಲರು ಹೇಳಿದರು.
ಶರ್ಮಾ ಅವರ ಹೇಳಿಕೆಗಳು ಧರ್ಮಗಳ ನಡುವೆ ಸೌಹಾರ್ದತೆಯನ್ನು ಸೃಷ್ಟಿಸುವ ನಮ್ಮ ಸಾಂವಿಧಾನದ ಉದ್ದೇಶದಿಂದ ಅಸಮರ್ಥನೀಯ ಮತ್ತು ಕಾನೂನುಬಾಹಿರ ವಿಚಲನವನ್ನು ಸೃಷ್ಟಿಸಿದೆ ಮತ್ತು ಜಾತ್ಯತೀತ ವಿಚಾರಗಳ ಆಧಾರದ ಮೇಲೆ ಸ್ಥಾಪಿತವಾಗಿರುವ ನಮ್ಮ ರಾಷ್ಟ್ರದ ಮೂಲ ತತ್ವಗಳಿಗೆ ಹೊಡೆತ ನೀಡಿದೆ ಎಂದು ಮನವಿಯಲ್ಲಿ ಸೇರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ