ಹೆಚ್ಚುವರಿ ನ್ಯಾಯಮೂರ್ತಿ ಪ್ರಮಾಣ ತಡೆಗೆ ಒಪ್ಪದ ಸುಪ್ರೀಂ
Team Udayavani, May 4, 2020, 7:17 PM IST
ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್ಗೆ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ಕಿರಿಯ ನ್ಯಾಯಾಧೀಶರನ್ನು ನೇಮಕ ಮಾಡಲಾಗಿದೆ ಎಂಬ ತಕರಾರು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ಅವರ ಪ್ರಮಾಣ ವಚನಕ್ಕೆ ತಡೆಯಾಜ್ಞೆ ನೀಡಬೇಕು ಎಂಬ ಮನವಿಯನ್ನೂ ನ್ಯಾ| ದೀಪಕ್ ಗುಪ್ತಾ ಮತ್ತು ನ್ಯಾ| ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠ ತಳ್ಳಿಹಾಕಿದೆ.
ನ್ಯಾಯಾಧೀಶರಾಗಿದ್ದ ಪದ್ಮರಾಜ ಎನ್.ದೇಸಾಯಿ ಅವರನ್ನು ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿತ್ತು. ಅದನ್ನು ಪ್ರಶ್ನೆ ಮಾಡಿ ಶಿವಮೊಗ್ಗ ಜಿಲ್ಲೆಯ ಪ್ರಧಾನ ನ್ಯಾಯಾಧೀಶ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮೀಜಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿ ಹಿರಿತನದ ಆಧಾರದಲ್ಲಿ ನೇಮಕ ನಡೆದಿಲ್ಲ. ಹೀಗಾಗಿ ಪ್ರಮಾಣ ವಚನಕ್ಕೆ ತಡೆಯಾಜ್ಞೆ ನೀಡಬೇಕೆಂದು ತಮ್ಮ ಪರ ವಕೀಲ ಸಂಜಯ ನುಳಿ ಮೂಲಕ ಕೋರಿದ್ದರು.
ಸೋಮವಾರ ಬೆಳಗ್ಗೆ 10.30ಕ್ಕೆ ಪ್ರಮಾಣ ವಚನ ನಿಗದಿಯಾಗಿತ್ತು. ಅದಕ್ಕೆ ಅರ್ಧಗಂಟೆ ಮೊದಲು ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಪೀಠ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ರಾಷ್ಟ್ರಪತಿಯವರ ಆದೇಶದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು