ರಾಜೀವ್ ಹತ್ಯೆ: ಶಿಕ್ಷೆ ರದ್ದು ಅರ್ಜಿ ತಳ್ಳಿಹಾಕಿದ ಸುಪ್ರೀಂ
Team Udayavani, Mar 15, 2018, 8:15 AM IST
ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಎ.ಜಿ.ಪೇರರಿವಾಲನ್ ಶಿಕ್ಷೆ ರದ್ದು ಮಾಡಬೇಕೆಂದು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. 1999ರ ಮೇ 11ರಂದು ಪೇರರಿವಾಲನ್ ಮತ್ತು ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿದ್ದನ್ನು ನಂತರ ಜೀವಾವಧಿ ಶಿಕ್ಷೆಯಾಗಿ ಮಾರ್ಪಾಡು ಮಾಡಲಾಗಿತ್ತು. ಪೇರರಿವಾಲನ್ ತನಗೆ ನೀಡಲಾಗಿರುವ ಶಿಕ್ಷೆ ರದ್ದು ಮಾಡಬೇಕು ಎಂಬ ಮನವಿಯನ್ನು ಪುರಸ್ಕರಿಸಲು ನ್ಯಾಯಪೀಠದ ಮುಂದೆ ಹಾಜರುಪಡಿಸಲಾಗಿರುವ ದಾಖಲೆಗಳು ಪೂರಕವಾಗಿಲ್ಲ ಎಂದು ನ್ಯಾ.ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಬುಧವಾರ ಅಭಿಪ್ರಾಯಪಟ್ಟಿದೆ. ಇದೇ ವೇಳೆ ಶ್ರೀಲಂಕಾ ರಾಜಧಾನಿ ಕೊಲೊಂಬೋ ಜೈಲಿನಲ್ಲಿರುವ ನಿಕ್ಸನ್ ಅಲಿಯಾಸ್ ಸುರೇನ್ ಎಂಬಾತನನ್ನು ತನಿಖೆ ನಡೆಸಿ ವಿವರ ಸಲ್ಲಿಸುವ ಬಗ್ಗೆ ಸಿಬಿಐಗೆ ನ್ಯಾಯಪೀಠ 4 ವಾರಗಳ ಸಮಯಾವಕಾಶ ನೀಡಿದೆ.
ವಿಚಾರಣೆ ವೇಳೆ ಸಿಬಿಐ ಪರ ವಾದಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪೇರರಿವಾಲನ್ ಅರ್ಜಿ ತಿರಸ್ಕರಿಸಬೇಕು. 1990ರ ಜೂನ್ ಮೊದಲ ವಾರದಲ್ಲಿ ಶ್ರೀಲಂಕಾಕ್ಕೆ ಭೇಟಿ ನೀಡಿದ್ದ ಎಂದು ವಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ