ರಾಷ್ಟ್ರಪತಿಯಿಂದ ಸಂಸತ್ ಭವನ ಉದ್ಘಾಟನೆಗೆ ಮನವಿ: ಅರ್ಜಿ ವಜಾಗೊಳಿಸಿದ Supreme Court
Team Udayavani, May 26, 2023, 12:42 PM IST
ಹೊಸದಿಲ್ಲಿ: ಭಾರತದ ಪ್ರಥಮ ಪ್ರಜೆ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸತ್ ಭವನದ ಉದ್ಘಾಟನೆಗೆ ಲೋಕಸಭೆಯ ಸೆಕ್ರೆಟರಿಯೇಟ್ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
“ನೀವು ಅಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ ಎಂಬುದು ನಮಗೆ ತಿಳಿದಿದೆ, ಇದನ್ನು ಪರಿಗಣಿಸಲು ನಾವು ಒಲವು ತೋರುತ್ತಿಲ್ಲ” ಎಂದು ಸುಪ್ರೀಂ ಕೋರ್ಟ್ ಪೀಠವು ಹೇಳಿದೆ. “ನಾವು ನಿಮ್ಮ ಮೇಲೆ ವೆಚ್ಚವನ್ನು ಹೇರುತ್ತಿಲ್ಲ ಎಂಬುದಕ್ಕೆ ಕೃತಜ್ಞರಾಗಿರಿ” ಎಂದು ಪೀಠವು ಹೇಳಿದೆ.
ನ್ಯಾಯವಾದಿ ಜಯ ಸುಕಿನ್ ಎಂಬುವರು ಈ ಬಗ್ಗೆ ದಾವೆ ಹೂಡಿದ್ದರು. ಮೇ 18ರಂದು ಲೋಕಸಭೆಯ ಸೆಕ್ರೆಟರಿ ಜನರಲ್ ಬಿಡುಗಡೆ ಮಾಡಿರುವ ಆಹ್ವಾನ ಪತ್ರಿಕೆ ದೇಶದ ಸಂವಿಧಾನವನ್ನು ಉಲ್ಲಂಘಿಸುತ್ತಿದೆ. ರಾಷ್ಟ್ರಪತಿ ದೇಶದ ಪ್ರಥಮ ಪ್ರಜೆ ಮತ್ತು ಅವರು ಸಂಸತ್ ನ ಮುಖ್ಯಸ್ಥರು. ದೇಶಕ್ಕೆ ಸಂಬಂಧಿಸಿದಂತೆ ಎಲ್ಲಾ ನಿರ್ಧಾರಗಳನ್ನು ರಾಷ್ಟ್ರಪತಿಗಳ ಹೆಸರಿನಲ್ಲಿಯೇ ಕೈಗೊಳ್ಳಲಾಗುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.
ಸಂವಿಧಾನದ 79ನೇ ವಿಧಿಯ ಅನ್ವಯ ರಾಷ್ಟ್ರಪತಿಗಳು ಸಂಸತ್ನ ಅವಿಭಾಜ್ಯ ಅಂಗ. ಹೀಗಾಗಿ ಉದ್ಘಾಟನಾ ಕಾರ್ಯಕ್ರಮದಿಂದ ಅವರನ್ನು ದೂರ ಇರಿಸುವಂತೆ ಇಲ್ಲ. ಈ ಹಿನ್ನೆಲೆಯಲ್ಲಿ ಲೋಕಸಭೆಯ ಕಾರ್ಯಾಲಯಕ್ಕೆ ಹೊಸ ಸಂಸತ್ ಭವನವನ್ನು ರಾಷ್ಟ್ರಪತಿಗಳಿಂದ ನಡೆಸಲು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು. 20 ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧಾರ ಮಾಡಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ