ಅಲ್ಪಸಂಖ್ಯಾತ ಸ್ಥಾನಮಾನ: ಸ್ಮಾರ್ತ ಬ್ರಾಹ್ಮಣರ ಅರ್ಜಿ ತಿರಸ್ಕೃತ
Team Udayavani, Oct 17, 2022, 7:16 PM IST
ನವದೆಹಲಿ: ಅಲ್ಪಸಂಖ್ಯಾತ ಸ್ಥಾನಮಾನ ಒದಗಿಸುವಂತೆ ಕೋರಿ ತಮಿಳುನಾಡಿನಲ್ಲಿ ವಾಸವಿರುವ, ಅದ್ವೈತ ಸಿದ್ಧಾಂತವನ್ನು ಅನುಸರಿಸುವ ಸ್ಮಾರ್ತ ಬ್ರಾಹ್ಮಣರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾ ಮಾಡಿದೆ.
ಸ್ಮಾರ್ತ ಬ್ರಾಹ್ಮಣ ಎನ್ನುವುದು ಧಾರ್ಮಿಕ ಪಂಗಡವಲ್ಲದ ಕಾರಣ, ಅವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲಾಗದು ಎಂದು ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ನ ನ್ಯಾ.ಕೃಷ್ಣ ಮುರಾರಿ ಮತ್ತು ನ್ಯಾ.ಎಸ್.ರವೀಂದ್ರ ಭಟ್ ಅವರನ್ನೊಳಗೊಂಡ ಪೀಠ ಎತ್ತಿಹಿಡಿದಿದೆ.
ಜತೆಗೆ, “ಅದ್ವೈತ ಸಿದ್ಧಾಂತವನ್ನು ಹಲವರು ಅನುಸರಿಸುತ್ತಾರೆ. ಹಾಗಂತ ಎಲ್ಲರಿಗೂ ಅಲ್ಪಸಂಖ್ಯಾತ ಸ್ಥಾನಮಾನ ನೀಡುತ್ತಾ ಹೋದರೆ, ನಾವು ಅಲ್ಪಸಂಖ್ಯಾತರ ದೇಶವನ್ನು ಹೊಂದಬೇಕಾಗುತ್ತದೆ’ ಎಂದೂ ಹೇಳಿದೆ.
ಸ್ಮಾರ್ತ ಬ್ರಾಹ್ಮಣ ಎನ್ನುವುದು ಬ್ರಾಹ್ಮಣರಿಂದ ಪ್ರತ್ಯೇಕ ಎಂದು ಹೇಳಿಕೊಳ್ಳುವಂಥ ವಿಶೇಷತೆ ಏನೂ ಇಲ್ಲದ ಕೇವಲ ಒಂದು ಜಾತಿ/ಸಮುದಾಯವಾಗಿದೆ. ಹೀಗಾಗಿ, ಅದು ತನ್ನನ್ನು ತಾನು ಧಾರ್ಮಿಕ ಪಂಗಡ ಎಂದು ಹೇಳಿಕೊಳ್ಳಲು ಬರುವುದಿಲ್ಲ. ಅದಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲೂ ಆಗುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ