ಎನ್ ಡಿಆರ್ ಎಫ್ ಗೆ ಪಿಎಂ ಕೇರ್ ನಿಧಿ ವರ್ಗಾಯಿಸುವಂತಿಲ್ಲ: ಸುಪ್ರೀಂಕೋರ್ಟ್
ಅಶೋಕ್ ಭೂಷಣ್ ನೇತೃತ್ವದ ತ್ರಿಸದಸ್ಯ ಪೀಠ ವಿಡಿಯೋ ಕಾನ್ಫೆರೆನ್ಸಿಂಗ್ ಮೂಲಕ ಈ ತೀರ್ಪನ್ನು ನೀಡಿತ್ತು.
Team Udayavani, Aug 18, 2020, 1:08 PM IST
ನವದೆಹಲಿ: ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಪಿಎಂ ಕೇರ್ ಫಂಡ್ ಹೆಸರಿನಲ್ಲಿ ಸಂಗ್ರಹವಾಗಿರುವ ಹಣವನ್ನು ಎನ್ ಡಿಆರ್ ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣ ಫಂಡ್) ಗೆ ವರ್ಗಾಯಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಂಗಳವಾರ (ಆಗಸ್ಟ್ 18, 2020) ಆದೇಶ ನೀಡಿದೆ. ಪಿಎಂ ಕೇರ್ ಹೆಸರಿನಲ್ಲಿ ಸಂಗ್ರಹಿಸಿರುವ ಹಣ ಸಂಪೂರ್ಣವಾಗಿ ಭಿನ್ನವಾಗಿದ್ದು, ಇದು ಚಾರಿಟೇಬಲ್ ಟ್ರಸ್ಟ್ ನ ನಿಧಿಯಾಗಿದೆ ಎಂದು ತಿಳಿಸಿದೆ.
ಸೆಂಟರ್ ಫಾರ್ ಪಬ್ಲಿಕ್ ಇನ್ ಟ್ರೆಸ್ಟ್ ಲಿಟಿಗೇಶನ್ (ಸಿಪಿಐಎಲ್) ಹೆಸರಿನ ಎನ್ ಜಿಒ ಸುಪ್ರೀಂಕೋರ್ಟ್ ಕಟಕಟೆ ಏರಿದ್ದು, ಕೇಂದ್ರ ಸರ್ಕಾರ ಪಿಎಂ ಕೇರ್ ನಿಧಿಯನ್ನು ಎನ್ ಡಿಆರ್ ಎಫ್ ಗೆ ವರ್ಗಾಯಿಸಲು ನಿರ್ದೇಶನ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು. ಜೂನ್ 17ರಂದು ಈ ಬಗ್ಗೆ ಉತ್ತರ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಸೂಚಿಸಿತ್ತು.
ರಾಷ್ಟ್ರೀಯ ವಿಪತ್ತು ನಿರ್ವಹಣೆಗೆ ಹೊಸ ಯೋಜನೆಯ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ತ್ರಿಸದಸ್ಯ ಪೀಠ ವಿಡಿಯೋ ಕಾನ್ಫೆರೆನ್ಸಿಂಗ್ ಮೂಲಕ ಈ ತೀರ್ಪನ್ನು ನೀಡಿತ್ತು.
ಪಿಎಂ ಕೇರ್ ಫಂಡ್ ನ ವ್ಯಾಲಿಟಿಡಿಯನ್ನು ಕೂಡಾ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಅಲ್ಲದೇ ಪಿಎಂ ಕೇರ್ ಹಣವನ್ನು ಎನ್ ಡಿಆರ್ ಎಫ್ ಗೆ ವರ್ಗಾಯಿಸಲು ಕೇಂದ್ರಕ್ಕೆ ಸೂಚನೆ ನೀಡಲು ಸುಪ್ರೀಂ ನಿರಾಕರಿಸಿದೆ.
Supreme Court of India upholds the validity of #PMCaresFund . Refuses to instruct Govt to transfer fund to NDRF . Hope that should send out a message…loud and clear.
— Dr Jitendra Singh (@DrJitendraSingh) August 18, 2020
ಈ ತೀರ್ಪು ಹೊರಬೀಳುತ್ತಿದ್ದಂತೆಯೇ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಟ್ವೀಟ್ ಮಾಡಿದ್ದು, ಸ್ಪಷ್ಟವಾದ ಸಂದೇಶವನ್ನು ರವಾನಿಸಿದಂತಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು