ನೀಟ್-ಪಿಜಿ ಕೌನ್ಸೆಲಿಂಗ್ ಆರಂಭಿಸಲು ಸುಪ್ರೀಂ ಸಮ್ಮತಿ : OBC, EWS ಮೀಸಲಾತಿಗೆ ಮಾನ್ಯತೆ
Team Udayavani, Jan 8, 2022, 7:00 AM IST
ನವದೆಹಲಿ : ಸುಮಾರು ನಾಲ್ಕು ತಿಂಗಳ ವಿಳಂಬದ ಬಳಿಕ ಕೊನೆಗೂ ವೈದ್ಯಕೀಯ ಸ್ನಾತಕೋತ್ತರ ಪದವಿ (ನೀಟ್-ಪಿಜಿ) ಕೌನ್ಸೆಲಿಂಗ್ಗೆ ಮುಹೂರ್ತ ಕೂಡಿಬಂದಿದೆ. ಕೇಂದ್ರ ಸರ್ಕಾರ ಜಾರಿ ಮಾಡಿದ್ದ ಹೊಸ ಮೀಸಲಾತಿ ನಿಯಮಗಳಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದ್ದು, ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸುವಂತೆ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೂ ದೊಡ್ಡ ಮಟ್ಟದ ರಿಲೀಫ್ ಸಿಕ್ಕಂತಾಗಿದೆ.
ನೀಟ್-ಪಿಜಿ ಪ್ರವೇಶದ ವೇಳೆ ಇತರೆ ಹಿಂದುಳಿದ ವರ್ಗಗಳಿಗೆ(ಒಬಿಸಿ) ಶೇ.27 ಮೀಸಲಾತಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಲ್ಯುಎಸ್)ಗಳಿಗೆ ಶೇ.10 ಮೀಸಲಾತಿ ನೀಡುವ ಸರ್ಕಾರದ ನಿಯಮಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠ ಅನುಮೋದನೆ ನೀಡಿದೆ. ಈಗಾಗಲೇ ನಿರ್ಧರಿಸಿರುವ ಮಾನದಂಡದ ಅನ್ವಯ, 2021-22ನೇ ಶೈಕ್ಷಣಿಕ ವರ್ಷದ ನೀಟ್-ಪಿಜಿ ಕೌನ್ಸೆಲಿಂಗ್ ನಡೆಸುವಂತೆ ಸೂಚಿಸಿದೆ.
ಸುಪ್ರೀಂನ ಈ ನಿರ್ಧಾರದಿಂದಾಗಿ ಈಗ ಸುಮಾರು 45,000 ಕಿರಿಯ ವೈದ್ಯರು ವೈದ್ಯಕೀಯ ಸೇವೆಗೆ ಲಭ್ಯವಾಗಲಿದ್ದಾರೆ. ಇತ್ತೀಚೆಗಷ್ಟೇ ಕೌನ್ಸೆಲಿಂಗ್ ವಿಳಂಬ ಖಂಡಿಸಿ ದೆಹಲಿಯಲ್ಲಿ ಸ್ಥಾನಿಕ ವೈದ್ಯರ ಸಂಘವು ಭಾರೀ ಪ್ರತಿಭಟನೆಯನ್ನೂ ನಡೆಸಿತ್ತು.
ಅರ್ಜಿದಾರರ ವಾದವೇನು?
ಕಳೆದ ವರ್ಷದ ಜುಲೈನಲ್ಲಿ ಕೇಂದ್ರ ಸರ್ಕಾರ ಪರಿಚಯಿಸಿದ್ದ ಮೀಸಲಾತಿಯನ್ನು ವಿರೋಧಿಸಿ ಸುಪ್ರೀಂಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಸರ್ಕಾರವು ಮೀಸಲಾತಿಗೆ ಅನುಸರಿಸಿರುವ ಮಾನದಂಡವನ್ನು ಸೂಕ್ತ ಅಧ್ಯಯನ ನಡೆಸದೇ ನಿಗದಿಪಡಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಲು ಇರುವ 8 ಲಕ್ಷ ರೂ.ಗಳ ವಾರ್ಷಿಕ ಆದಾಯದ ಮಿತಿಯನ್ನು 2.5 ಲಕ್ಷ ರೂ.ಗಳಿಗೆ ಇಳಿಸಬೇಕು ಮತ್ತು ವೈದ್ಯ ಸ್ನಾತಕೋತ್ತರ ಪ್ರವೇಶವು ಯಾವತ್ತೂ ಮೆರಿಟ್ ಆಧರಿತವಾಗಿದ್ದು, ಕನಿಷ್ಠ ಮೀಸಲಾತಿ ಅನುಸರಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ