ಸಾಕ್ಷ್ಯ ಹೇಳುವವರಿಗೆ ರಕ್ಷಣೆ ನಿಯಮಕ್ಕೆ ಸುಪ್ರೀಂ ಓ.ಕೆ.
Team Udayavani, Dec 6, 2018, 6:00 AM IST
ಹೊಸದಿಲ್ಲಿ: ನ್ಯಾಯಾಲಯಗಳಲ್ಲಿ ಸಾಕ್ಷ್ಯ ನುಡಿಯುವವರಿಗೆ ರಕ್ಷಣೆ ನೀಡುವುದರ ಬಗ್ಗೆ ಇರುವ ಕರಡು ಪ್ರಸ್ತಾವನೆಗೆ ಸುಪ್ರೀಂ ಕೋರ್ಟ್ ಬುಧವಾರ ಅಂಗೀಕಾರ ನೀಡಿದೆ. ಹೀಗಾಗಿ ಇಂಥ ಕಾನೂನುಗಳನ್ನು ಹೊಂದಿರುವ ರಾಷ್ಟ್ರಗಳ ಸಾಲಿಗೆ ಭಾರತವೂ ಸೇರಿದಂತಾಗಲಿದೆ. ಸಂಸತ್ನಲ್ಲಿ ಈ ಬಗ್ಗೆ ಸೂಕ್ತ ಕಾನೂನು ರಚನೆ ಯಾಗುವ ವರೆಗೆ ಎಲ್ಲಾ ರಾಜ್ಯಗಳು ಅದನ್ನು ಜಾರಿ ಮಾಡ ಬೇಕು ಎಂದು ನ್ಯಾ.ಎ.ಕೆ.ಸಿಕ್ರಿ ಅವರ ನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ ಸೂಚಿಸಿದೆ. ದೇವಮಾನವ ಅಸಾರಾಂ ಬಾಪು ವಿರುದ್ಧದ ಪ್ರಕರಣದಲ್ಲಿ ಸಾಕ್ಷಿಗಳ ವಿರುದ್ಧ ಹಲ್ಲೆ, ಬೆದರಿಕೆ ಯೊಡ್ಡುವ ಘಟನೆಗಳು ನಡೆದಿವೆ ಎಂದು ವರದಿ ಯಾಗಿದ್ದ ಹಿನ್ನೆಲೆ ಯಲ್ಲಿ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಕಾನೂನು ರಚಿಸುವಂತೆ ಸೂಚಿಸಿತ್ತು.
ಸಾಕ್ಷ್ಯಗಳ ರಕ್ಷಣಾ ಯೋಜನೆ 2018 ರಾಷ್ಟ್ರ ಮಟ್ಟದಲ್ಲಿ ವಿಶೇಷ ಯೋಜನೆಯಾಗಿದೆ. ತನಿಖೆ ವೇಳೆ ಸಾಕ್ಷ್ಯ ಹೇಳುವವರಿಗೆ ರಕ್ಷಣೆ ನೀಡುವುದರ ಬಗ್ಗೆ ಪ್ರಸ್ತಾಪಿಸಲಾಗಿದೆ. ಜತೆಗೆ ಆರೋಪಕ್ಕೆ ಗುರಿ ಯಾದವರು ಮತ್ತು ಸಾಕ್ಷ್ಯ ನುಡಿಯುವವರು ಮುಖಾಮುಖೀ ಯಾಗಬಾರದು ಎಂದು ಸೂಚಿಸಲಾಗಿದೆ. ಅಮೆರಿಕ, ಯು.ಕೆ., ಚೀನಾಗಳಲ್ಲಿ ಈ ಕಾನೂನು ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ