ಜಾಲತಾಣಗಳಿಗೆ ಕಾನೂನು ನಿಯಂತ್ರಣ ಅಗತ್ಯ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ
Team Udayavani, Jul 4, 2022, 6:55 AM IST
ಹೊಸದಿಲ್ಲಿ: ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಯನ್ನು ಸುಸ್ಥಿತಿಯಲ್ಲಿ ಇರಿಸಲು ಸಾಮಾಜಿಕ ಜಾಲತಾಣಗಳನ್ನು ನಿಯಂತ್ರಣದಲ್ಲಿ ಇರಿಸುವ ಅಗತ್ಯವಿದೆ. ಹೀಗೆಂದು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಅಭಿಪ್ರಾಯಪಟ್ಟಿದ್ದಾರೆ.
ಒಂದು ನಿರ್ದಿಷ್ಟ ಅಜೆಂಡಾ ಇರಿಸಿಕೊಂಡು ವೈಯಕ್ತಿಕ ದಾಳಿ ನಡೆಸುವುದು ಅಪಾಯ ಎಂದೂ ಹೇಳಿದ್ದಾರೆ.
ಪ್ರವಾದಿ ಮೊಹಮ್ಮದ್ ವಿರುದ್ಧ ಅವಮಾನ ಖಂಡಿಸಿ ದೇಶದಲ್ಲಿ ನಡೆದಿದ್ದ ಹಿಂಸಾ ಚಾರ ನಡೆಯಲು ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಕಾರಣ ಎಂದು ಟೀಕಿಸಿದ್ದ ನ್ಯಾಯಪೀಠದಲ್ಲಿ ನ್ಯಾ| ಪರ್ದಿವಾಲಾ ಕೂಡ ಇದ್ದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ನ್ಯಾಯದಾನ ಪ್ರಕ್ರಿಯೆಯಲ್ಲಿ ಡಿಜಿಟಲ್ ಮಾಧ್ಯಮ ವಿನಾ ಕಾರಣ ಅಡ್ಡಿ ಉಂಟು ಮಾಡುತ್ತಿದೆ ಎಂದರು.
ಕೆಲವೊಂದು ಬಾರಿ “ಲಕ್ಷ್ಮಣ ರೇಖೆ’ ಮೀರುವುದು ಆತಂಕ ಉಂಟು ಮಾಡುತ್ತದೆ ಎಂದಿದ್ದಾರೆ. ದೇಶದ ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ವಿಶಿಷ್ಟವಾದ ಪಾತ್ರ ವಹಿಸುವ ನ್ಯಾಯಾಂಗ ವ್ಯವ ಸ್ಥೆಯ ಪ್ರತಿಯೊಂದು ಅಂಶಕ್ಕೂ ರಾಜಕೀಯ ಲೇಪನ ಮಾಡುವುದು ನಿಜಕ್ಕೂ ಅಪಾಯಕಾರಿ ಬೆಳವಣಿಗೆ. ಇಂಥ ಪರಿಸ್ಥಿತಿ ನಿರ್ಮಾಣವಾದಾಗ ಹೇಗೆ ತೀರ್ಪು ನೀಡಬೇಕು ಎಂಬ ಬಗ್ಗೆ ನ್ಯಾಯ ಮೂರ್ತಿಗಳು ದ್ವಂದ್ವಕ್ಕೆ ಒಳಗಾಗುವ ಆತಂಕವಿದೆ ಎಂದಿದ್ದಾರೆ ನ್ಯಾ| ಜೆ.ಬಿ. ಪರ್ದಿವಾಲಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಟ್ವೀಟ್ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ವಿಚಲಿತಗೊಳಿಸಿದ್ದೇಕೆ ?
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
ಪುಲ್ವಾಮಾ: ತಪ್ಪಿದ ಭಾರೀ ದುರಂತ-30 ಕೆಜಿ ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸಿದ ಸೇನೆ
ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : ಎಂಟು ಮಹಿಳೆಯರು ಸೇರಿ 9 ಮಂದಿ ಸಾವು
ಭಾರತದಲ್ಲಿ ಮಹಿಳಾ ಪೈಲಟ್ ಪ್ರಮಾಣ ಅಮೆರಿಕಕ್ಕಿಂತ ಹೆಚ್ಚು!
MUST WATCH
ಹೊಸ ಸೇರ್ಪಡೆ
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ
ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ
ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್, ಡಯೆಟ್ಗೆ ಸಹಕಾರಿ
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ