ಶಬರಿಮಲೆ ವಿಶೇಷ ಕಾಯ್ದೆ: ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ
Team Udayavani, Nov 21, 2019, 12:32 AM IST
ನವದೆಹಲಿ: ಶಬರಿಮಲೆ ದೇಗುಲದ ಆಡಳಿತಕ್ಕಾಗಿಯೇ ವಿಶೇಷ ಕಾನೂನು ರೂಪಿಸುವಂತೆ ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ಆದೇಶ ನೀಡಿದೆ. ಮುಂದಿನ ವರ್ಷದ ಜನವರಿಯ ಮೂರನೇ ವಾರದ ಒಳಗಾಗಿ ಸಂಭಾವ್ಯ ಆಡಳಿತದ ರೀತಿಯ ಬಗ್ಗೆ ವಿವರಣೆ ಸಲ್ಲಿಸುವಂತೆ ಸೂಚನೆ ನೀಡಿದೆ. ಅದರಲ್ಲಿ ಯಾತ್ರಾರ್ಥಿಗಳಿಗೆ ಕಲ್ಪಿಸಲಾಗುವ ಅನುಕೂಲದ ಬಗ್ಗೆಯೂ ಮಾಹಿತಿ ನೀಡುವಂತೆ ಸೂಚನೆ ನೀಡಿದೆ.
ಆಡಳಿತ ವ್ಯವಸ್ಥೆಯಲ್ಲಿ ಮೂರನೇ ಒಂದರಷ್ಟು ವ್ಯವಸ್ಥೆಯನ್ನು ಮಹಿಳೆಯರಿಗೆ ನೀಡುವಂತೆಯೂ ನ್ಯಾ.ಎನ್.ವಿ. ರಮಣ ನೇತೃತ್ವದ ನ್ಯಾಯಪೀಠ ಹೇಳಿದೆ. 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಅಂಶಗಳನ್ನು ಜಾರಿ ಮಾಡುವುದರ ನಿಟ್ಟಿನಲ್ಲಿ ನ್ಯಾಯಪೀಠ ನೀಡಿದ ಆದೇಶ ಮಹತ್ವ ಪಡೆದಿದೆ. ಕೆಲ ದಿನಗಳ ಹಿಂದೆ ನಿವೃತ್ತ ಸಿಜೆಐ ಗೊಗೋಯ್ ನೇತೃತ್ವದ ಸಾಂವಿಧಾನಿಕ ಪೀಠ ಮಹಿಳೆಯರ ಪ್ರವೇಶ ವಿಚಾರವನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ