ಕೋವಿಡ್ ಪರಿಹಾರ ತ್ವರಿತವಾಗಿ ನೀಡಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ
Team Udayavani, Jul 18, 2022, 8:00 PM IST
ನವದೆಹಲಿ: ಕೋವಿಡ್ ದಿಂದ ಮೃತಪಟ್ಟ ದುರ್ದೈವಿಗಳ ಸಂಬಂಧಿಕರಿಗೆ ಪರಿಹಾರ ನೀಡುವಿಕೆಯಲ್ಲಿ ಯಾವುದೇ ವಿಳಂಬ ಧೋರಣೆ ಅನುಸರಿಸಬಾರದು. ಕಾಲಹರಣ ಮಾಡದಂತೆ ಇಂಥ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಬೇಕು ಎಂದು ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಹಾಗೊಂದು ವೇಳೆ, ದುರ್ದೈವಿಗಳ ಸಂಬಂಧಿಕರಿಗೆ ಪರಿಹಾರ ತಲುಪುವುದು ತಡವಾದರೆ ಅಥವಾ ಪರಿಹಾರಕ್ಕಾಗಿ ಅವರು ಸಲ್ಲಿಸಿದ ಅರ್ಜಿಯು ತಿರಸ್ಕೃತಗೊಂಡರೆ, ಅಂಥವರು ಆಯಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಕುಂದುಕೊರತೆಗಳ ಸಮಿತಿಯ ಮೊರೆ ಹೋಗಬಹುದು ಎಂದು ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಹಾಗೂ ಬಿ.ವಿ. ನಾಗರತ್ನ ಅವರುಳ್ಳ ನ್ಯಾಯಪೀಠ ಹೇಳಿದೆ.
ಅಲ್ಲದೆ, ಅರ್ಜಿದಾರರು ಕುಂದುಕೊರತೆಗಳ ಸಮಿತಿಯ ಮೊರೆ ಹೋದರೆ ಅಂಥ ಅರ್ಜಿಗಳನ್ನು ಸಮಿತಿಯು ನಾಲ್ಕು ವಾರಗಳೊಳಗೆ ಇತ್ಯರ್ಥಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ