ತಾಜ್ಗೆ ಪಾಚಿ ಬಾಧೆ
Team Udayavani, May 10, 2018, 6:00 AM IST
ನವದೆಹಲಿ: ಪ್ರೇಮಸೌಧ ತಾಜ್ಮಹಲ್ ಪಾಚಿ ಮತ್ತು ಕೀಟದ ಬಾಧೆಯಿಂದ ನಲುಗುತ್ತಿದೆ. ಹೀಗಾಗಿ ಅದನ್ನು ರಕ್ಷಿಸುವಲ್ಲಿ ಏಕೆ ವಿಫಲರಾಗಿದ್ದೀರಿ ಎಂದು ಭಾರತೀಯ ಪ್ರಾಚ್ಯವಸ್ತು ಸಂಶೋಧನಾ ಇಲಾಖೆ (ಎಎಸ್ಐ)ಯನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅದನ್ನು ರಕ್ಷಿಸಲು ಕೈಗೊಂಡ ಕ್ರಮಗಳೇನು ಎಂದು ನ್ಯಾ.ಎಂ.ಬಿ.ಲೋಕುರ್ ನೇತೃತ್ವದ ಪೀಠ ಕೇಳಿದೆ. ತನ್ನ ನಿರ್ಲಕ್ಷ್ಯವನ್ನು ಸಮರ್ಥಿಸಿಕೊಳ್ಳುವ ಇಲಾಖೆಯ ಅಗತ್ಯವಿದೆಯೇ ಎಂದು ಪರಾಮ ರ್ಶಿಸಬೇಕು ಎಂದು ನ್ಯಾಯಪೀಠ ಕೇಂದ್ರಕ್ಕೆ ಸೂಚಿಸಿತು. ತಾಜ್ ಮಹಲ್ ಹತ್ತಿರದ ಯಮುನಾ ನದಿಯ ಅಲ್ಲಲ್ಲಿ ನೀರು ನಿಂತಿರುವುದೇ ಕೀಟಬಾಧೆಗೆ ಕಾರಣ ಎಂದು ಎಎಸ್ಐ ಮಂಡಿಸಿದ ವಾದವನ್ನು ನ್ಯಾಯ ಪೀಠ ಒಪ್ಪಲಿಲ್ಲ.
ಸರ್ಕಾರದ ಪರವಾಗಿ ಮಾತನಾಡಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಎನ್ಎಸ್ ನಾಡಕರ್ಣಿ, ತಾಜ್ಮಹಲ್ನ ಸಂರಕ್ಷಣೆಗೆ ಅಂತಾರಾಷ್ಟ್ರೀಯ ತಜ್ಞರ ನೆರವು ಪಡೆಯಲು ಸರ್ಕಾರ ಚಿಂತನೆ ನಡೆಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
MUST WATCH
ಹೊಸ ಸೇರ್ಪಡೆ
Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್