ಮಿಂಚಿನ ವೇಗದಲ್ಲಿ ಇಸಿ ನೇಮಕ ಅಚ್ಚರಿ ವ್ಯಕ್ತಪಡಿಸಿದ ಸುಪ್ರೀಂ
Team Udayavani, Nov 25, 2022, 6:25 AM IST
ನವದೆಹಲಿ: ಚುನಾವಣಾ ಆಯುಕ್ತರನ್ನಾಗಿ ಅರುಣ್ ಗೋಯಲ್ ಅವರ ನೇಮಕ ಪ್ರಕ್ರಿಯೆ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಖಡಕ್ ಪ್ರಶ್ನೆಗಳನ್ನು ಹಾಕಿದೆ.
ಗೋಯಲ್ ನೇಮಕ ಕುರಿತ ಫೈಲ್ ಅನ್ನು ತಮಗೆ ಸಲ್ಲಿಸುವಂತೆ ಬುಧವಾರವೇ ಸುಪ್ರೀಂ ಕೋರ್ಟ್ ಸಂವಿಧಾನ ಪೀಠವು ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರಿಗೆ ಸೂಚಿಸಿತ್ತು. ಅದರಂತೆ, ಗುರುವಾರ ಫೈಲ್ ಪರಿ ಶೀಲಿಸಿದ ನ್ಯಾಯಪೀಠ, “ಇದು ಯಾವ ರೀತಿಯ ಮೌಲ್ಯಮಾಪನ? ಈ ಫೈಲ್ ಇಲಾಖೆ ಯೊಳಗೆ 24 ಗಂಟೆಯೂ ಸುತ್ತಿಲ್ಲ. ಅಂದರೆ ಮಿಂಚಿನ ವೇಗದಲ್ಲಿ ಈ ನೇಮ ಕಾತಿ ನಡೆದಿದೆ. ಇದು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಎಜಿ ವೆಂಕಟರಮಣಿ, “ದಯವಿಟ್ಟು ನೇಮಕ ಪ್ರಕ್ರಿಯೆಗೆ ಸಂಬಂಧಿಸಿದ ವಿಚಾರವನ್ನು ಪೂರ್ಣವಾಗಿ ಗಮನಿಸಿಯೇ ಕೋರ್ಟ್ ತನ್ನ ಅಭಿಪ್ರಾಯ ವ್ಯಕ್ತಪಡಿಸಬೇಕು’ ಎಂದರು.
ಇದಕ್ಕೆ ನ್ಯಾ.ಅಜಯ್ ರಸ್ತೋಗಿ ಅವರು, “ನೀವು ಕೋರ್ಟ್ ಹೇಳುವು ದನ್ನು ಸರಿಯಾಗಿ ಆಲಿಸಿ, ನಮ್ಮ ಪ್ರಶ್ನೆಗೆ ಉತ್ತರಿಸಿ. ನಾವು ಚುನಾವಣಾ ಅಧಿಕಾರಿಯ ಬಗ್ಗೆ ಮಾತನಾಡುತ್ತಿಲ್ಲ, ನೇಮಕ ಪ್ರಕ್ರಿಯೆ ಬಗ್ಗೆ ಮಾತಾಡುತ್ತಿದ್ದೇವೆ’ ಎಂದರು. ಇದಕ್ಕೆ ಎಜಿ ಪ್ರತಿಕ್ರಿಯಿಸಿ, “ನಾವು ಎಲ್ಲ ನೇಮಕಗಳನ್ನೂ ಅನುಮಾನ ದಿಂದಲೇ ನೋಡಿದರೆ, ಅದು ಸಂಸ್ಥೆಯ ಘನತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಹೀಗಾಗಿ, ಈ ಕುರಿತು ಇಂದು ನಾವು ಚರ್ಚಿಸುವುದು ಬೇಡ’ ಎಂದರು. ಚುನಾವಣಾ ಆಯುಕ್ತರ ನೇಮಕ ಕುರಿತ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಪೀಠ, ತೀರ್ಪನ್ನು ಕಾಯ್ದಿರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು