ರಫೇಲ್ ಡೀಲ್ ತನಿಖೆ ತೀರ್ಪು ಕಾಯ್ದಿರಿಸಿದ ಸುಪ್ರೀಂ, 4 ಗಂಟೆ ವಿಚಾರಣೆ
Team Udayavani, Nov 14, 2018, 4:26 PM IST
ನವದೆಹಲಿ: ಸುದೀರ್ಘ 4ಗಂಟೆಗಳ ಕಾಲ ಫ್ರಾನ್ಸ್ ಜತೆಗಿನ 36 ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಬುಧವಾರ ತೀರ್ಪನ್ನು ಕಾಯ್ದಿರಿಸಿದೆ.
ರಫೇಲ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆ ಅಥವಾ ಬೇಡವೇ ಎಂಬ ಆದೇಶವನ್ನು ಕಾಯ್ದಿರಿಸಿದೆ.
ಅಷ್ಟೇ ಅಲ್ಲ ಯುದ್ಧ ವಿಮಾನದ ದರದ ವಿವರದ ಬಗ್ಗೆ ಈಗ ಚರ್ಚಿಸುವುದು ಬೇಡ. ಅರ್ಜಿದಾರರಿಗೆ ಈ ಹಂತದಲ್ಲಿ ಸರ್ಕಾರ ಯುದ್ಧ ವಿಮಾನದ ಬೆಲೆಯ ಮಾಹಿತಿಯನ್ನು ಹಂಚಿಕೊಳ್ಳಬೇಕಾದ ಅಗತ್ಯವಿಲ್ಲ. ರಫೇಲ್ ಡೀಲ್ ಕುರಿತು ಕೋರ್ಟ್ ನಿರ್ಧಾರ ತೆಗೆದುಕೊಂಡ ನಂತರ ಬೆಲೆ ಬಗ್ಗೆ ಸಾರ್ವಜನಿಕ ವಲಯಕ್ಕೆ ನೀಡಬೇಕೆ ಬೇಡವೇ ಚರ್ಚೆಯ ಬಗ್ಗೆ ನಿಲುವು ತೆಗೆದುಕೊಳ್ಳಲು ನಿರ್ದೇಶನ ನೀಡುವುದಾಗಿ ತಿಳಿಸಿದೆ.
ರಫೇಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಸೂಕ್ತ ಕ್ರಮ ಅನುಸರಿಸಲಾಗಿದೆಯೇ ಎಂಬುದನ್ನು ನಿರ್ಧರಿಸುವ ನಿಟ್ಟಿನಲ್ಲಿ ಭಾರತೀಯ ವಾಯುಪಡೆಯ ಅಧಿಕಾರಿಗಳ ವಿವರಣೆಯನ್ನು ಸುಪ್ರೀಂ ಪೀಠ ಪಡೆದಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಎಸ್ ಕೆ ಕೌಲ್ ಮತ್ತು ಕೆಎಂ ಜೋಸೆಫ್ ನೇತೃತ್ವದ ತ್ರಿಸದಸ್ಯ ಪೀಠ ನಡೆಸಿದ ವಿಚಾರಣೆ ವೇಳೆ, ನಮಗೆ ರಕ್ಷಣಾ ಸಚಿವಾಲಯದವರ ಅಗತ್ಯವಿಲ್ಲ. ಖರೀದಿಗೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆಯ ಅಧಿಕಾರಿಗಳ ವಿವರಣೆ ಬೇಕು ಎಂದು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರಿಗೆ ಸೂಚನೆ ನೀಡಿತ್ತು.
ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಇಂದು ಏರ್ ಮಾರ್ಷಲ್ ವಿಆರ್ ಚೌಧರಿ ಮತ್ತು ಇಬ್ಬರು ಹಿರಿಯ ಅಧಿಕಾರಿಗಳು ತ್ರಿಸದಸ್ಯ ಪೀಠಕ್ಕೆ ವಿವರಣೆ ನೀಡಿದ್ದರು. ಫ್ರಾನ್ಸ್ ನ ಡಸ್ಸಾಲ್ಟ್ ಕಂಪನಿ ಜೊತೆ 36 ರಫೇಲ್ ಯುದ್ಧ ವಿಮಾನ ಖರೀದಿ ಬಗ್ಗೆ ಹೇಗೆ ನಿರ್ಧಾರ ಕೈಗೊಳ್ಳಲಾಯಿತು ಎಂಬ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂಕೋರ್ಟ್ ಗೆ ವಿವರ ನೀಡಿತ್ತು. ಯುದ್ಧ ವಿಮಾನದ ಬೆಲೆ ಕುರಿತ ಮಾಹಿತಿಯನ್ನೂ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ ಗೆ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ