ಅಯೋಧ್ಯೆ ಸಾಧಾರಣ ಭೂ ವಿವಾದ: ಸುಪ್ರೀಂಕೋರ್ಟ್
Team Udayavani, Feb 9, 2018, 9:10 AM IST
ಹೊಸದಿಲ್ಲಿ: ದಶಕಗಳಿಂದ ಚಾಲ್ತಿಯಲ್ಲಿರುವ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ವಿವಾದ ಪ್ರಕರಣವು ಸಾಧಾ ರಣ ಭೂವಿವಾದವಾಗಿದ್ದು, ಅದನ್ನು ಸಹಜ ಕಲಾಪದಂ ತೆಯೇ ವಿಚಾರಣೆಗೊಳಪಡಿಸಿ ಇತ್ಯರ್ಥಪಡಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಕರಣದ ಅಂತಿಮ ಹಂತದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ, ಗುರುವಾರ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಯಿತು. ಈ ವೇಳೆ, ಅಲಹಾಬಾದ್ ಹೈಕೋರ್ಟ್ನಲ್ಲಿ ಈ ಪ್ರಕರಣವಿದ್ದಾಗ, ಪ್ರಕರಣದ ಕಕ್ಷಿದಾರರಾಗಿದ್ದವರೇ ಸುಪ್ರೀಂ ಕೋರ್ಟ್ ವಿಚಾರಣೆಯಲ್ಲೂ ಕಕ್ಷಿದಾರರಾಗಿರಬೇಕೆಂದು, ಇತ್ತೀಚೆಗೆ ಪ್ರಕರಣದ ಬಗ್ಗೆ ವಿವಿಧ ನಾಗರಿಕರು, ಸಂಸ್ಥೆಗಳು ಸಲ್ಲಿಸಿರುವ ಮನವಿಗಳನ್ನು ಆನಂತರ ಪರಿಗಣಿಸಲಾಗುವುದು ಎಂದು ನ್ಯಾಯಪೀಠ ಸೂಚಿಸಿತು. ಅಲ್ಲದೆ, ಹೊಸ ಕಕ್ಷಿದಾರರು ಸಲ್ಲಿಸಿರುವ ದಾಖಲೆಗಳನ್ನು ಇಂಗ್ಲೀಷ್ಗೆ ತರ್ಜುಮೆ ಮಾಡಿ 2 ವಾರಗಳ ಒಳಗೆ ನೀಡುವಂತೆ ನ್ಯಾಯಪೀಠ ಸೂಚಿಸಿತು. ನಂತರ ಮುಂದಿನ ವಿಚಾರಣೆ ಮಾ.14ಕ್ಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು