ಬಿಬಿಎಂಪಿ ಚುನಾವಣೆ ಅರ್ಜಿ ವಿಚಾರಣೆಗೆ ಸುಪ್ರೀಂ ಇಂಗಿತ
Team Udayavani, Nov 9, 2021, 9:45 PM IST
ನವದೆಹಲಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಬೇಕು ಎಂಬ ಕರ್ನಾಟಕ ಸರ್ಕಾರದ ಮನವಿಯನ್ನು ಪರಿಣಿಗಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾ.ಸೂರ್ಯಕಾಂತ್, ನ್ಯಾ.ಹಿಮಾ ಕೋಹ್ಲಿ ಅವರನ್ನೊಳಗೊಂಡ ನ್ಯಾಯಪೀಠಕ್ಕೆ 2020ರ ಡಿ.4ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಮತ್ತು ಬಿಬಿಎಂಪಿಯ ಐದು ವರ್ಷದ ಆಡಳಿತದ ಅವಧಿ 2020ರ ಸೆಪ್ಟೆಂಬರ್ನಲ್ಲಿಯೇ ಮುಕ್ತಾಯವಾಗಿದೆ.
ಹೀಗಾಗಿ, ಕೂಡಲೇ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ವಕೀಲ ನಝೀಮ್ ಪಾಶಾ ನ್ಯಾಯಪೀಠಕ್ಕೆ ಅರಿಕೆ ಮಾಡಿಕೊಂಡರು.
ಕರ್ನಾಟಕ ಸರ್ಕಾರ ಚುನಾವಣೆ ನಡೆಸುವುದರ ಬದಲಾಗಿ, 2020 ಸೆ.23ರಂದು ಕ್ಷೇತ್ರಗಳ ಪುನರ್ ವಿಂಗಡಣೆ ನಡೆಸುವಂತೆ ಆದೇಶ ನೀಡಿತ್ತು.
ಇದನ್ನೂ ಓದಿ:ಪ್ರತಿಭೆ ಅನಾವರಣಕ್ಕೆ ಪಂದ್ಯಾವಳಿ ಉತ್ತಮ ವೇದಿಕೆ
ಕರ್ನಾಟಕ ಹೈಕೋರ್ಟ್ ಸರ್ಕಾರದ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿ, ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶ ನೀಡಿತ್ತು. ಆದರೆ, ಸದ್ಯ ನಿವೃತ್ತರಾಗಿರುವ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬೆx ನೇತೃತ್ವದ ನ್ಯಾಯಪೀಠ 2020 ಡಿ.4ರಂದು ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು ಎಂದರು.
ಅದಕ್ಕೆ ತಕ್ಷಣವೇ ಪ್ರತಿಕ್ರಿಯೆ ನೀಡಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ “ಅದಕ್ಕೆ ಸಂಬಂಧಿಸಿದ ಕಡತವನ್ನು ನನ್ನ ಕೊಠಡಿಗೆ ಕಳುಹಿಸಿ ಕೊಡಿ. ಅದನ್ನು ಪರಿಶೀಲಿಸುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು