ಅರ್ಜಿ ಸ್ವೀಕೃತ: ನೋಟಾ ಬಳಕೆ: ವಿಚಾರಣೆಗೆ ಅಸ್ತು
Team Udayavani, Aug 3, 2017, 8:10 AM IST
ಹೊಸದಿಲ್ಲಿ: ರಾಜ್ಯಸಭೆ ಚುನಾವಣೆಯಲ್ಲಿ ‘ನೋಟಾ’ (ಮೇಲಿನ ಯಾರೂ ಅಲ್ಲ) ಗುಂಡಿಯನ್ನು ಮತಯಂತ್ರದಲ್ಲಿ ಅಳವಡಿಸುವ ಕುರಿತ ಆಕ್ಷೇಪಣ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಗುಜರಾತ್ ಕಾಂಗ್ರೆಸ್ ಶಾಸಕರು ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ, ತಮ್ಮ ವಕೀಲ ಕಪಿಲ್ ಸಿಬಲ್ ಅವರ ಮೂಲಕ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಅರ್ಜಿ ವಿಚಾರಣೆ ನಡೆಸಲು ನ್ಯಾ| ದೀಪಕ್ ಮಿಶ್ರಾ ಅವರಿದ್ದ ನ್ಯಾಯಪೀಠ ಒಪ್ಪಿಕೊಂಡಿದೆ. ಅರ್ಜಿ ಸಲ್ಲಿಕೆ ವೇಳೆ ವಾದ ಮಂಡಿಸಿದ ಸಿಬಲ್, ನೋಟಾ ಅಳವಡಿಕೆಗೆ ಕಾನೂನುಬದ್ಧ ಅವಕಾಶವಿಲ್ಲ ಎಂದಿದ್ದಾರೆ. ಆದರೆ ಸರ್ಕಾರಿ ಅಧಿಕಾರಿಗಳ ಪ್ರಕಾರ, 2014 ಜನವರಿಯಲ್ಲಿ ರಾಜ್ಯಸಭಾ ಚುನಾವಣೆ ನಡೆದಿದ್ದಾಗ ನೋಟಾ ಅಳವಡಿಸಲಾಗಿತ್ತು. 2013ರಲ್ಲಿ ಸುಪ್ರೀಂ ಇಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ನೋಟಾ ಅಳವಡಿಕೆಗೆ ಆದೇಶಿಸಿದ್ದು, ಅದರಂತೆ ಅಳವಡಿಸಲಾಗಿತ್ತು. ಮಂಗಳವಾರವಷ್ಟೇ ನೋಟಾ ಕೈಬಿಡುವಂತೆ ಆಯೋಗಕ್ಕೆ ಕಾಂಗ್ರೆಸ್ ಕೋರಿತ್ತು,
ಬಿಜೆಪಿಯಿಂದಲೂ ಮನವಿ
ಗುಜರಾತ್ ರಾಜ್ಯಸಭೆ ಚುನಾವಣೆ ವೇಳೆ ನೋಟಾಕ್ಕೆ ಅವಕಾಶ ನೀಡಬಾರದು ಎಂದು ಇದೀಗ ಬಿಜೆಪಿ ಕೂಡ ಚುನಾವಣ ಆಯೋಗಕ್ಕೆ ಮನವಿ ಮಾಡಿದೆ. ‘ರಾಜ್ಯಸಭೆ ಚುನಾವಣೆಯಲ್ಲಿ ಗೌಪ್ಯತೆ ಎಂಬುದಿಲ್ಲ. ಪಕ್ಷದ ವಿಪ್ ಸೂಚಿಸಿದವರಿಗೆ ಮತ ಹಾಕಬೇಕಾಗುತ್ತದೆ. ಆದ್ದರಿಂದ ನೋಟಾದ ಅಗತ್ಯ ಇರುವುದಿಲ್ಲ. ಅಲ್ಲದೇ ವಿಪ್ನ ಸ್ವರೂಪದ ವಿರುದ್ಧ ನೋಟಾ ಜಾರಿ ಮಾಡಿದಂತಾಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಹಾಯಕ ಸಚಿವ ಮುಖ್ತರ್ ಅಬ್ಟಾಸ್ ನಖ್ವೀ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ