ಆ.1ಕ್ಕೆ ಉದ್ಧವ್ ಬಣದ ಅರ್ಜಿ ವಿಚಾರಣೆ: ಸುಪ್ರೀಂ ಕೋರ್ಟ್
Team Udayavani, Jul 26, 2022, 8:11 PM IST
ನವದೆಹಲಿ: “ನೈಜ ಶಿವಸೇನೆ ಯಾರದ್ದು’ ಎಂಬ ಪ್ರಶ್ನೆಗೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಹಾಗೂ ಏಕನಾಥ ಶಿಂಧೆ ಬಣದ ನಡುವಿನ ಕಾದಾಟ ಮುಂದುವರಿದಿದೆ.
ನಮ್ಮದೇ ನೈಜ ಶಿವಸೇನೆ ಎಂದು ಹೇಳಿ ಶಿಂಧೆ ಬಣ ಸಲ್ಲಿಸಿರುವ ಅರ್ಜಿಯ ಕುರಿತು ತೀರ್ಮಾನ ಕೈಗೊಳ್ಳಲು ಚುನಾವಣಾ ಆಯೋಗ ಮುಂದಾಗಿದ್ದು, ಅದನ್ನು ಪ್ರಶ್ನಿಸಿ ಉದ್ಧವ್ ಬಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಸುಪ್ರೀಂ ಕೋರ್ಟ್ಗೆ ಅರಿಕೆ ಮಾಡಿಕೊಂಡ ವಕೀಲ ಕಪಿಲ್ ಸಿಬಲ್, “ಪ್ರಕರಣ ಸುಪ್ರೀಂನಲ್ಲಿರುವಾಗ ಚುನಾವಣಾ ಆಯೋಗವು ನಿರ್ಧಾರಕ್ಕೆ ಬರುವುದು ತಪ್ಪಾಗುತ್ತದೆ. ಹೀಗಾಗಿ, ಆಯೋಗದ ತನಿಖೆಗೆ ತಡೆಯಾಜ್ಞೆ ತರಬೇಕು’ ಎಂದು ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ಆ.1ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ರಮಣ ನೇತೃತ್ವದ ನ್ಯಾಯಪೀಠ ಮಂಗಳವಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು