ವಿಶ್ವಾಸಮತ ಸಾಬೀತಿಗೆ ರಾಜ್ಯಪಾಲರ ಸೂಚನೆ ಸರಿ: ಸುಪ್ರೀಂಕೋರ್ಟ್
Team Udayavani, Apr 14, 2020, 11:30 PM IST
ನವದೆಹಲಿ: ಕಮಲ್ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಲು ರಾಜ್ಯಪಾಲ ಲಾಲ್ಜಿ ಟಂಡನ್ ಸೂಚಿಸಿದ್ದು ಸರಿಯಾಗಿಯೇ ಇದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯಪಾಲರಿಗೆ ಇಂಥ ಸೂಚನೆ ನೀಡಲು ಅಧಿಕಾರ ಇದೆ ಎಂದು ನ್ಯಾ.ಡಿ.ವೈ.ಚಂದ್ರಚೂಡ್ ಮತ್ತು ನ್ಯಾ.ಹೇಮಂತ್ ಗುಪ್ತಾ ನೇತೃತ್ವದ ನ್ಯಾಯಪೀಠ ಹೇಳಿದೆ.
1994ರ ಎಸ್.ಆರ್.ಬೊಮ್ಮಾಯಿ ಪ್ರಕರಣ ಉಲ್ಲೇಖೀಸಿದ ನ್ಯಾಯಪೀಠ, ಬಹುಮತ ಸಾಬೀತುಮಾಡುವಂತೆ ಮುಖ್ಯಮಂತ್ರಿಗೆ ಸೂಚಿಸಲು ರಾಜ್ಯಪಾಲರಿಗೆ ಅಧಿಕಾರ ಇದೆ ಎಂದು ಅಭಿಪ್ರಾಯಪಟ್ಟಿದೆ. ಕಮಲ್ನಾಥ್ ಪ್ರಕರಣದಲ್ಲಿ ಕೂಡ ರಾಜ್ಯಪಾಲ ಲಾಲ್ಜಿ ಟಂಡನ್ಗೆ ಅಂಥ ಅಧಿಕಾರವಿದೆ ಎಂದಿದೆ. ಸದನದಲ್ಲಿ ವಿಶ್ವಾಸಮತ ಸಾಬೀತು ಮಾಡಲು ಸಿಎಂ ನಿರಾಕರಿಸಿದರು ಎಂದಾದರೆ ಮೇಲ್ನೋಟಕ್ಕೇ ಅವರಿಗೆ ಬಹುಮತ ಇಲ್ಲ ಎನ್ನುವುದು ಸಾಬೀತಾಗುತ್ತದೆ ಎಂದು ಐತಿಹಾಸಿಕ ತೀರ್ಪಿನಲ್ಲಿ ಉಲ್ಲೇಖೀಸಿದ್ದ ಅಂಶವನ್ನು ನ್ಯಾಯಪೀಠ ಮತ್ತೂಮ್ಮೆ ಪ್ರಸ್ತಾಪ ಮಾಡಿತು.
ಇದರಿಂದಾಗಿ ಸುಪ್ರೀಂ ಮೆಟ್ಟಿಲೇರಿದ್ದ ಮಾಜಿ ಸಿಎಂ ಕಮಲ್ನಾಥ್ಗೆ ಹಿನ್ನೆಡೆಯಾಗಿದೆ. ರಾಜ್ಯಪಾಲರಿಗೆ ವಿಶೇಷ ಅಧಿವೇಶನ ಕರೆಯಲು ಮಾತ್ರ ಅಧಿಕಾರವಿದೆ. ವಿಶ್ವಾಸಮತ ಸಾಬೀತು ಮಾಡಿ ಎಂದು ಹೇಳಲು ಅಧಿಕಾರವೇ ಇಲ್ಲ ಎಂದಿದ್ದರು. ಮಾ.19ರಂದು ಮಧ್ಯಪ್ರದೇಶ ವಿಧಾನಸಭೆ ಸ್ಪೀಕರ್ ಎನ್.ಪಿ.ಪ್ರಜಾಪತಿಗೆ ಮಾ.20 ವಿಶೇಷ ಅಧಿವೇಶನ ನಡೆಸಿ ಬಹುಮತ ಸಾಬೀತು ಮಾಡಲು ಅವಕಾಶ ಮಾಡುವಂತೆ ಸೂಚಿಸಿತ್ತು ಸುಪ್ರೀಂಕೋರ್ಟ್. ಅದೇ ದಿನ 15 ತಿಂಗಳು ಅಧಿಕಾರ ನಡೆಸಿ ಕಮಲ್ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ