Sharad Pawar : ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ರಾವತ್ ಸಹೋದರರಿಗೆ ಜೀವ ಬೆದರಿಕೆ
Team Udayavani, Jun 9, 2023, 12:19 PM IST
ಮಹಾರಾಷ್ಟ್ರ: ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಬಂದಿದೆ ಎಂದು ಸಂಸದೆ ಸುಪ್ರಿಯಾ ಸುಳೆ ಅವರು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, “ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಬಂದಿದೆ. ನನ್ನ ವಾಟ್ಸಾಪ್ ಗೆ ಅಪರಿಚಿತರು ವೆಬ್ ಸೈಟ್ ವೊಂದರ ಮೂಲಕ ಜೀವ ಬೆದರಿಕೆಯನ್ನು ಹಾಕಿರುವ ಸಂದೇಶಗಳು ಬಂದಿದೆ. ಪೊಲೀಸರ ಬಳಿ ಕ್ರಮಕೈಗೊಳ್ಳಿ ಎಂದು ಕೇಳಲು ಬಂದಿದ್ದೇನೆ” ಎಂದು ಎಎನ್ ಐಗೆ ಸುಪ್ರಿಯಾ ಸುಳೆ ಅವರು ತಿಳಿಸಿದ್ದಾರೆ.
“ನಾನು ಮಹಾರಾಷ್ಟ್ರ ಗೃಹ ಸಚಿವರು ಮತ್ತು ಕೇಂದ್ರ ಗೃಹ ಸಚಿವರನ್ನು ಒತ್ತಾಯಿಸುತ್ತೇನೆ. ಇದು ಕೀಳುಮಟ್ಟದ ರಾಜಕೀಯವಾಗಿದ್ದು, ಇದು ನಿಲ್ಲಬೇಕು,” ಎಂದು ಸುಪ್ರಿಯಾ ಸುಳೆ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
ಇದನ್ನೂ ಓದಿ: ಇದು ಯಾವ ರೀತಿಯ ಪ್ರೀತಿ? ರಾಹುಲ್ ‘ಮೊಹಬ್ಬತ್ ಕಿ ದುಕಾನ್’ ಹೇಳಿಕೆಗೆ ಸ್ಮೃತಿ ತಿರುಗೇಟು
“ಶರದ್ ಪವಾರ್ ಅವರ ಭದ್ರತೆಯ ಜವಾಬ್ದಾರಿ ಗೃಹ ಸಚಿವಾಲಯದ ಮೇಲಿದೆ. ಈ ಪ್ರಕರಣದಲ್ಲಿ ಗೃಹ ಸಚಿವರು ಮಧ್ಯ ಪ್ರವೇಶಿಸಬೇಕು. ಶರದ್ ಪವಾರ್ ದೇಶದ ನಾಯಕ. ಎನ್ಸಿಪಿ ಮುಖ್ಯಸ್ಥರಿಗೆ ಬೆದರಿಕೆ ಇದೆ ಎಂದು ನಾನು ಪೊಲೀಸರಿಗೆ ಹೇಳಿದ್ದೇನೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ” ಎಂದು ವರದಿ ತಿಳಿಸಿದೆ.
ಇನ್ನೊಂದೆಡೆ ಲೋಕಸಭಾ ಸದಸ್ಯ ಸಂಜಯ್ ರಾವತ್ ಹಾಗೂ ಅವರ ಸಹೋದರ ಶಾಸಕ ಸುನಿಲ್ ರಾವತ್ ಅವರಿಗೆ ಅಪರಿಚಿತರಿಂದ ಜೀವ ಬೆದರಿಕೆ ಕರೆ ಬಂದಿವೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ