ಸೂರತ್ ಅಗ್ನಿ ಅವಘಡ: ನಿರಶನ ಬೆದರಿಕೆ ಹಾಕಿದ ಹಾರ್ದಿಕ್ ಪೊಲೀಸರ ವಶಕ್ಕೆ
Team Udayavani, May 27, 2019, 4:11 PM IST
ಸೂರತ್ : 22 ವಿದ್ಯಾರ್ಥಿಗಳನ್ನು ಬಲಿ ಪಡೆದಿರುವ ಸೂರತ್ ಕೋಚಿಂಗ್ ಕ್ಲಾಸ್ ಸೆಂಟರ್ ಅಗ್ನಿ ದುರಂತಕ್ಕೆ ಸಂಬಂಧಿಸಿ ಗುಜರಾತ್ ಸರಕಾರ ಸೂರತ್ ಮೇಯರ್ ಮತ್ತು ಇತರ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ತನಕ ತಾನು ಅನ್ನ ಸತ್ಯಾಗ್ರಹ ನಡೆಸುವುದಾಗಿ ಬೆದರಿಕೆ ಹಾಕಿರುವ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರನ್ನು ಇಂದು ಸೋಮವಾರ ಪೊಲೀಸರು ವಶಕ್ಕೆ ತೆಗೆದುಕೊಂಡರು.
ಅಗ್ನಿ ಅವಘಡ ನಡೆದ ಸ್ಥಳಕ್ಕೆ ಸಮೀಪ ಪ್ರತಿಭಟನೆ ಕೈಗೊಳ್ಳಲು ಸರ್ತಾನಾ ಪೊಲೀಸ್ ಠಾಣೆ ಅನುಮತಿಯನ್ನು ಕಾಂಗ್ರೆಸ್ ಕೋರಿತ್ತು. ಆದರೆ ಅನುಮತಿ ನಿರಾಕರಿಸಲಾಗಿತ್ತು. ಆದಾಗ್ಯೂ ಅವಘಡ ತಾಣಕ್ಕೆ ತೆರಳಲು ಮುಂದಾದ ಪಟೇಲ್ ಅವರನ್ನು ಪೊಲೀಸರು ಮಾರ್ಗ ಮಧ್ಯದಲ್ಲೇ ಬಂಧಿಸಿದರು ಎಂದು ಸೂರತ್ ಪೊಲೀಸ್ ಕಮಿಷನರ್ ಸತೀಶ್ ಶರ್ಮಾ ತಿಳಿಸಿದರು.
ಮಾಧ್ಯಮದೊಂದಿಗೆ ಮಾತನಾಡಿದ ಶರ್ಮಾ, ಅವರು ಪಟೇಲ್ ನಿನ್ನೆಯೇ ಅವಘಡ ತಾಣಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಎದುರಾಳಿ ಗುಂಪಿನವರು ಪಟೇಲ್ ಮೇಲೆ ಹಲ್ಲೆ ನಡೆಸಿದ್ದರು. ಅಂತೆಯೇ ಪಟೇಲ್ ಅವರ ಭದ್ರತೆಯ ಸಲುವಾಗಿ ಅವರಿಗೆ ಪ್ರತಿಭಟನೆಗೆ ಅವಕಾಶ ನಿರಾಕರಿಸಲಾಗಿದೆ. ದಿನಂಪ್ರತಿ ಅವರು ಅವಘಡ ತಾಣಕ್ಕೆ ಭೇಟಿ ಕೊಡುವುದು ಕೂಡ ಸರಿಯಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!