ಅತ್ಯಾಚಾರ ಪ್ರಕರಣ : ಅಸರಾಂ ಪುತ್ರ ನಾರಾಯಣ ಸಾಯಿ ದೋಷಿ
ಸಹೋದರಿಯರ ಅತ್ಯಾಚಾರ ಪ್ರಕರಣದಲ್ಲಿ ಅಸರಾಂ ಪುತ್ರನ ಮೇಲಿನ ಆರೋಪ ಸಾಬೀತು
Team Udayavani, Apr 26, 2019, 3:21 PM IST
ಸೂರತ್: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವ ಮಾನವ ಅಸರಾಂ ಬಾಪು ಪುತ್ರ ನಾರಾಯಣ ಸಾಯಿ ಅವರನ್ನು ದೋಷಿ ಎಂದು ಸೂರತ್ ಸೆಷನ್ ನ್ಯಾಯಾಲಯ ಘೋಷಿಸಿದೆ. ಗುಜರಾತ್ ನ ಸೂರತ್ ನಲ್ಲಿ ಸಹೋದರಿಯರಿಬ್ಬರ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣದಲ್ಲಿ ನಾರಾಯಣ ಸಾಯಿ ಅವರ ಮೇಲಿನ ಆರೋಪ ಸಾಬೀತಾಗಿದೆ.
ಈ ಅತ್ಯಾಚಾರ ಪ್ರಕರಣದಲ್ಲಿ ನಾರಾಯಣ ಸಾಯಿ ಅವರ ಜೊತೆ ಆರೋಪಿಗಳಾಗಿದ್ದ ಗಂಗಾ, ಜಮುನಾ ಮತ್ತು ಹನುಮಾನ್ ಮೇಲಿನ ಆರೋಪಗಳೂ ಸಹ ಸಾಬೀತುಗೊಂಡಿದ್ದು ಈ ಮೂವರನ್ನೂ ಸಹ ನ್ಯಾಯಾಲವು ದೋಷಿಗಳು ಎಂದು ತೀರ್ಮಾನಿಸಿದೆ. ಆದರೆ ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಇನ್ನೋರ್ವ ಮಹಿಳೆ ಮೋನಿಕಾಳನ್ನು ನ್ಯಾಯಾಲವು ಮುಗ್ದೆ ಎಂದು ತನ್ನ ತೀರ್ಪಿನಲ್ಲಿ ಉಲ್ಲೇಖೀಸಿದೆ. ಅಪರಾಧಿಗಳಿಗೆ ಶಿಕ್ಷೆಯ ಮಾದರಿ ಮತ್ತು ಪ್ರಮಾಣವನ್ನು ನ್ಯಾಯಾಲವು ಎಪ್ರಿಲ್ 30ರಂದು ಪ್ರಕಟಿಸಲಿದೆ.
ನಾರಾಯಣ ಸಾಯಿ ವೇಷ ಮರೆಸಿಕೊಂಡು ದೇಶ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ದೆಹಲಿ ಪೊಲೀಸರಿಂದ 2013ನೇ ಇಸವಿ ಡಿಸೆಂಬರ್ ತಿಂಗಳಲ್ಲಿ ಬಂಧಿಸಲ್ಪಟ್ಟಿದ್ದ. 2013ರಲ್ಲಿ ದಾಖಲಾಗಿರುವ ಈ ಅತ್ಯಾಚಾರ ಪ್ರಕರಣದಲ್ಲಿ ನಾರಾಯಣ ಸಾಯಿ ತಂದೆ ಅಸಾರಾಂ ಬಾಪೂ ಕೂಡ ಆರೋಪಿಯಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್