ಸರ್ಜಿಕಲ್‌ ದಾಳಿ ಪಡೆ: ಗಡಿಯಾಚೆಗೆ ದಾಳಿ ನಡೆಸುವುದೇ ಪ್ರಮುಖ ಗುರಿ 


Team Udayavani, Dec 5, 2018, 8:47 AM IST

surgical-strike.jpg

ಹೊಸದಿಲ್ಲಿ: ಎರಡು ವರ್ಷಗಳ ಹಿಂದೆ ಪಾಕಿಸ್ಥಾನದ ಗಡಿಯೊಳಕ್ಕೆ ರಾತೋರಾತ್ರಿ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದ ಭಾರತೀಯ ಸೇನೆ ಈಗ ಇನ್ನೂ ಒಂದು ಹೆಜ್ಜೆ ಮುಂದಿಟ್ಟು, ಇಂಥ “ಸರ್ಜಿಕಲ್‌ ದಾಳಿ’ ನಡೆಸುವುದಕ್ಕೆಂದೇ ವಿಶೇಷ ಪಡೆಯೊಂದನ್ನು ರೂಪಿಸಲು ಮುಂದಾಗಿದೆ.

ಈ ವಿಶೇಷ ಪಡೆಯು ಗಡಿಯಾಚೆಗೆ ಹಠಾತ್‌ ದಾಳಿ ನಡೆಸಿ ಶತ್ರುವಿಗೆ ತಕ್ಕ ಪಾಠ ಕಲಿಸಲಿದೆ. ಮಿಂಚಿನ ದಾಳಿ ನಡೆಸುವ ಈ ಪಡೆ, ಅಷ್ಟೇ ಕ್ಷಿಪ್ರವಾಗಿ ಯುದ್ಧ ಸನ್ನಿವೇಶದಿಂದ ಮಾಯವಾಗಲಿದೆ. 2016ರಲ್ಲಿ ಯಾವ ರೀತಿ ದಾಳಿಯನ್ನು ಸೇನೆ ಯೋಜಿಸಿತ್ತೋ ಅದೇ ರೀತಿಯ ದಾಳಿಗಳನ್ನು ಈ ಪಡೆ ನಡೆಸಲಿದೆ.

ಎಲ್ಲ ಪಡೆಗಳ ಆಯ್ದ ಯೋಧರು
ಸರ್ಜಿಕಲ್‌ ಸ್ಟ್ರೈಕ್‌ ನಡೆಸಲು ವಿಶೇಷ ಸಾಮರ್ಥ್ಯದ ಪ್ರತ್ಯೇಕ ತಂಡವೊಂದು ಅಗತ್ಯವಿದೆ ಎಂದು ಕೇಂದ್ರ ಸರಕಾರ ಭಾವಿಸಿದ ಹಿನ್ನೆಲೆಯಲ್ಲಿ ಈ ತಂಡ ರೂಪುಗೊಂಡಿದೆ. ಇದಕ್ಕಾಗಿ ಸೇನೆಯ ಮೂರು ಪಡೆ(ಭೂಸೇನೆ,ನೌಕಾಸೇನೆ,
ವಾಯುಸೇನೆ)ಗಳಿಂದಲೂ ಆಯ್ದ ಯೋಧರನ್ನು ಸೇರಿಸಿಕೊಳ್ಳಲಾಗುತ್ತದೆ. ಇವರಿಗೆ ಅಮೆರಿಕದ ನೇವಿ ಸೀಲ್‌ಗ‌ಳು ಹೊಂದಿರುವಂತಹ ವಿಶೇಷ ಪರಿಣತಿಯನ್ನು ಒದಗಿಸಲಾಗುತ್ತದೆ. 

ಎರಡು ವಿಭಾಗ
ಈ ಪಡೆಯು “ಯೋಜನೆ’ ಹಾಗೂ  ದಾಳಿ’ ಎಂಬ ಎರಡು ವಿಭಾಗಗಳನ್ನು ಹೊಂದಿರುತ್ತದೆ. ದಾಳಿ ವಿಭಾಗದಲ್ಲಿ 124 ಯೋಧರು ಹಾಗೂ ಯೋಜನೆ ವಿಭಾಗದಲ್ಲಿ 96 ಯೋಧರು ಇರುತ್ತಾರೆ. ಎರಡು ತಂಡಗಳಲ್ಲಿ ಒಂದು ತಂಡ ದಾಳಿ ನಡೆಸಿದರೆ, ಇನ್ನೊಂದು ತಂಡವು ಬೆಂಬಲವಾಗಿ ಇರುತ್ತದೆ.

ಅತ್ಯಾಧುನಿಕ ಕೌಶಲ
“ದಾಳಿ’ ವಿಭಾಗದಲ್ಲಿನ ಯೋಧರು ಉತ್ತಮ ಕೌಶಲ ಹೊಂದಿರುತ್ತಾರೆ. ವಾಯುಪಡೆಯ ತಂಡ ನೀಡುವ ಸೂಚನೆಗಳಿಗೆ ಅನುಗುಣವಾಗಿ ಕೆಲಸ ಮಾಡುವುದು, ಅವರೊಂದಿಗೆ ಉತ್ತಮ ಸಹಕಾರ ಸಾಧಿಸುವುದು ಮುಂತಾದ ವಿಶೇಷ ಕೌಶಲವನ್ನು ಈ ಯೋಧರು ಹೊಂದಿರುತ್ತಾರೆ. 

ದೋವಲ್‌ ಕನಸಿನ ಯೋಜನೆ
ಹಠಾತ್‌ ದಾಳಿಗೆಂದೇ ಪ್ರತ್ಯೇಕ ಪಡೆಯನ್ನು ರಚಿಸುವುದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರ ಕನಸಿನ ಯೋಜನೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಂಪುಟ ವರದಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಗಡಿಯಲ್ಲಿ  ಮತ್ತು ಕರಾವಳಿಯಲ್ಲಿ ಉಗ್ರರ ದಾಳಿ ಹಾಗೂ ದಾಳಿ ಭೀತಿ ಇತ್ತೀಚೆಗೆ ಹೆಚ್ಚುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರತ್ಯೇಕ ಬಜೆಟ್‌
ಸದ್ಯದ ಮಟ್ಟಿಗೆ ಈಗ ಲಭ್ಯವಿರುವ ಮೂಲಸೌಕರ್ಯಗಳನ್ನೇ ಈ ತಂಡ ಬಳಸಿಕೊಳ್ಳಲಿದೆ. ಆದರೆ ಎಲ್ಲಿ ಈ ತಂಡ ನೆಲೆಯೂರುತ್ತದೆ ಎಂಬುದು ತಿಳಿದುಬಂದಿಲ್ಲ. ಮುಂದಿನ ದಿನಗಳಲ್ಲಿ ಪ್ರತ್ಯೇಕ ಬಜೆಟ್‌ ಅನ್ನು ಇದಕ್ಕಾಗಿ ನಿಗದಿಪಡಿಸಲಾಗುತ್ತದೆ.

ಪಾಕ್‌ ಉಗ್ರ ನೆಲೆ ಗುರಿ
ಈ ತಂಡ ರೂಪಿಸಿರುವುದರ ಮೂಲ ಉದ್ದೇಶವೇ ಪಾಕ್‌ ಗಡಿ ಭಾಗದಲ್ಲಿರುವ ಉಗ್ರ ನೆಲೆಗಳನ್ನು ಧ್ವಂಸಗೊಳಿಸುವುದಾಗಿದೆ. ಆದರೆ ಇಂಥದ್ದೊಂದು ತಂಡ ರಚಿಸುವ ಮೂಲಕ ಶತ್ರುಗಳನ್ನು ಮಾನಸಿಕವಾಗಿ ಕುಗ್ಗಿಸುವ ತಂತ್ರವೂ ಅಡಗಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.