ಅಗತ್ಯ ಬಿದ್ದರೆ ಇನ್ನಷ್ಟು ಸರ್ಜಿಕಲ್ ದಾಳಿ : ಸೇನಾ ಮುಖ್ಯಸ್ಥ ರಾವತ್
Team Udayavani, Jan 13, 2017, 5:17 PM IST
ಹೊಸದಿಲ್ಲಿ : ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯವೆಂದು ಕಂಡುಬಂದಲ್ಲಿ ಇನ್ನಷ್ಟು ಸರ್ಜಿಕಲ್ ದಾಳಿ ನಡೆಸುವುದನ್ನು ಭಾರತ ಆಯ್ಕೆ ಮಾಡಬಹುದಾಗಿದೆ ಎಂದು ನೂತನ ಸೇನಾ ಮುಖ್ಯಸ್ಥ ಜ| ಬಿಪಿನ್ ರಾವತ್ ಅವರು ಪಾಕಿಸ್ಥಾನವನ್ನು ಗುರಿ ಇರಿಸಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
“ಈಚಿನ ದಿನಗಳಲ್ಲಿ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆಯ ಪ್ರಕರಣಗಳು ಕಡಿಮೆಯಾಗಿವೆ. ಒಂದೊಮ್ಮೆ ಕದನ ವಿರಾಮ ಉಲ್ಲಂಘನೆ ಮುಂದುವರಿದಲ್ಲಿ ನಾವು ಇನ್ನಷ್ಟು ಸರ್ಜಿಕಲ್ ದಾಳಿಗಳನ್ನು ಕೈಗೊಳ್ಳಬೇಕಾದೀತು’ ಎಂದು ಜನರಲ್ ರಾವತ್ ಅವರು ಇಂದು ಶುಕ್ರವಾರ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.
“ಕದನ ವಿರಾಮ ಉಲ್ಲಂಘನೆ ಪ್ರಕರಣಗಳು ಕಡಿಮೆಯಾಗಿವೆಯಾದರೂ ಉಗ್ರರ ಒಳುನುಸುಳುವಿಕೆ ಪ್ರಕರಣಗಳು ಕಡಿಮೆಯಾಗಿಲ್ಲ. ಎರಡು ದಿನಗಳ ಹಿಂದಷ್ಟೇ ಗಡಿ ನುಸುಳಿ ಬಂದ ಇಬ್ಬರು ಉಗ್ರರನ್ನು ಪೂಂಚ್ನಲ್ಲಿ ನಮ್ಮ ಭದ್ರತಾ ಪಡೆಗಳು ಗುಂಡಿಕ್ಕಿ ಸಾಯಿಸಿವೆ’ ಎಂದು ರಾವತ್ ಹೇಳಿದರು.
“ಸರ್ಜಿಕಲ್ ದಾಳಿಗಳು ಯಾಕೆ ಮುಖ್ಯವಾಗುತ್ತವೆ; ಅವುಗಳ ಉದ್ದೇಶ ಏನು ಎಂಬುದನ್ನು ಮೊತ್ತ ಮೊದಲಾಗಿ ತಿಳಿಯುವುದು ಅಗತ್ಯ. ಕದನ ವಿರಾಮ ಉಲ್ಲಂಘನೆ ಮತ್ತು ಉಗ್ರರ ಒಳ ನಸುಳುವಿಕೆ ಬಗ್ಗೆ ನಮಗೆ ಗಡಿಯಾಚೆಯಿಂದ ಸ್ಪಷ್ಟವಾದ ಉತ್ತರ ಅಥವಾ ಸಂದೇಶ ಬಾರದೆ ಹೋದಲ್ಲಿ ಮತ್ತು ಉಗ್ರರ ಒಳನಸುಳುವಿಕೆಗೆ ಆ ಕಡೆಯಿಂದ ಪ್ರೋತ್ಸಾಹ ಮುಂದುವರಿಯುತ್ತಲೇ ಹೋದಲ್ಲಿ, ಸರ್ಜಿಕಲ್ ದಾಳಿ ನಡೆಸುವ ಅಗತ್ಯ ಉಂಟಾಗುತ್ತದೆ’ ಎಂದು ಜ| ರಾವತ್ ಹೇಳಿದರು.
ಭಾರತೀಯ ಸೈನಿಕ ಚಂದು ಚವಾಣ್ ಅವರನ್ನು ಬಿಡುಗಡೆ ಮಾಡುವ ಬದ್ಧತೆಯನ್ನು ಪಾಕ್ ಮಿಲಿಟರಿ ಅಧಿಕಾರಿಗಳು ದೃಢಪಡಿಸಿದ್ದಾರೆ; ಕಳೆದ ವರ್ಷ ಸೆಪ್ಟಂಬರ್ 30ರಂದು ಯೋಧ ಚವಾಣ್ ಅಛಾನಕ್ ಆಗಿ ಗಡಿ ದಾಟಿ ಪಾಕ್ ನೆಲವನ್ನು ಪ್ರವೇಶಿಸಿದರು ಎಂದು ರಾವತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ