ನಗರ ಪ್ರದೇಶಗಳಲ್ಲಿ ಹೈಸ್ಕೂಲ್ ಪ್ರಾಯದಲ್ಲೇ ‘ಸೆಕ್ಸ್’ ಅನುಭವ !


Team Udayavani, Feb 13, 2019, 9:09 AM IST

sex-chart-13-2.jpg

ನಮ್ಮ ದೇಶದಲ್ಲಿ ‘ಸೆಕ್ಸ್’ ಅಥವಾ ಲೈಂಗಿಕತೆಯ ಬಗ್ಗೆ ಮುಕ್ತವಾಗಿ ಮಾತನಾಡುವುದೇ ಅಪರಾಧ ಎನ್ನುವಂತಹ ಸ್ಥಿತಿ ಇದೆ. ಆದರೆ ಕಾಲ ಬದಲಾದಂತೆ ಮತ್ತು ಮಾಹಿತಿ ತಂತ್ರಜ್ಞಾನ ಮನೆ ಮನೆಗಳಿಗೆ ತಲುಪುತ್ತಿರುವಂತೆ ಇತ್ತೀಚಿನ ದಿನಗಳಲ್ಲಿ ನಿಧಾನವಾಗಿ ನಮ್ಮ ಯುವಜನಾಂಗ ‘ಸೆಕ್ಸ್’ ಕುರಿತಾದ ಮಡಿವಂತಿಕೆಯಿಂದೆ ದೂರ ಸರಿಯುತ್ತಿದೆ ಮಾತ್ರವಲ್ಲದೆ ಪಾಶ್ಚಿಮಾತ್ಯ ದೇಶಗಳಲ್ಲಿರುವಂತೆ ವಿವಾಹ ಪೂರ್ವ ಲೈಂಗಿಕ ಚಟುವಟಿಕೆಗಳನ್ನು ಸಹಜವಾಗಿ ಒಪ್ಪಿಕೊಳ್ಳುವ ಮನಸ್ಥಿತಿ ನಮ್ಮಲ್ಲೂ ಮೂಡಿಬರುತ್ತಿದೆ.

ಇದಕ್ಕೆ ಪುಷ್ಠಿ ನೀಡುವಂತೆ, ‘ವಿಟಮಿನ್ ಸ್ತ್ರೀ’ ಎಂಬ ಯೂ ಟ್ಯೂಬ್ ಚಾನೆಲ್ ನಮ್ಮ ದೇಶದ ನಗರ ಪ್ರದೇಶಗಳಲ್ಲಿ ಸಮೀಕ್ಷೆಯೊಂದನ್ನು ನಡೆಸಿತ್ತು. ಈ ಸಮೀಕ್ಷೆಯಿಂದ ಹೊರಬಿದ್ದ ಮಾಹಿತಿಗಳು ಬಹಳ ಕುತೂಹಲಕರವಾಗಿತ್ತು ಮಾತ್ರವಲ್ಲದೇ ಇವತ್ತಿನ ವಿದ್ಯಾರ್ಥಿ ಸಮುದಾಯ ಮತ್ತು ಯುವಸಮೂಹ ಯಾವ ರೀತಿಯಲ್ಲಿ ಅಂತರ್ಜಾಲ ಮಾಧ್ಯಮ ಪ್ರಭಾವಕ್ಕೊಳಪಟ್ಟಿದೆ ಎಂಬ ಅಂಶವನ್ನೂ ಇದು ಹೊರಗೆಡಹಿದೆ. ಈ ಸಮೀಕ್ಷೆಯಿಂದ ಹೊರಬಿದ್ದ ಒಂದು ಕುತೂಹಲಕಾರಿ ಮಾಹಿತಿಯೆಂದರೆ ನಮ್ಮ ದೇಶದ ನಗರ ಪ್ರದೇಶಗಳಲ್ಲಿ ವಾಸಿಸುವ ಅಪ್ರಾಪ್ತರಲ್ಲಿ 46 ಪರ್ಸಂಟೇಜ್ ಜನ ತಮ್ಮ 13ನೇ ವರ್ಷದಲ್ಲಿಯೇ ‘ಸೆಕ್ಸ್’ ವಿಚಾರಗಳ ಕುರಿತು ತಿಳಿದುಕೊಂಡಿರುತ್ತಾರೆ ಎಂಬುದು. ಇಷ್ಟು ಮಾತ್ರವಲ್ಲದೇ ಇನ್ನೊಂದು ಆತಂಕಕಾರಿ ವಿಚಾರವೆಂದರೆ ಇವರಲ್ಲಿ ಹೆಚ್ಚಿನ ಸಂಖ್ಯೆಯ ಅಪ್ರಾಪ್ತರು ತಾವು ಅಸುರಕ್ಷಿತ ಲೈಂಗಿಕ ಚಟುವಟಿಕೆಗಳನ್ನು ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ. ಇನ್ನು, ನಗರ ಪ್ರದೇಶದಲ್ಲಿರುವ 50 ಪ್ರತಿಶತದಷ್ಟು ಅಪ್ರಾಪ್ತರು 14 ರಿಂದ 18 ವರ್ಷ ಪ್ರಾಯದಲ್ಲೇ ತಮ್ಮ ಲೈಂಗಿಕ ಪಾವಿತ್ರ್ಯತೆಯನ್ನು (ವರ್ಜಿನಿಟಿ) ಕಳೆದುಕೊಳ್ಳುತ್ತಿದ್ದಾರೆ ಎಂಬ ಅಂಶವೂ ಈ ಸಮೀಕ್ಷೆಯಿಂದ ಬಯಲಾಗಿದೆ.

 

ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಈ ಆನ್ ಲೈನ್ ಸಮೀಕ್ಷೆಯನ್ನು ನಡೆಸಲಾಗಿತ್ತು. ಸುಮಾರು 2,500 ಜನರನ್ನು ಸಂಪರ್ಕಿಸಿ ಮಾಹಿತಿಗಳನ್ನು ಪಡೆದುಕೊಳ್ಳಲಾಗಿತ್ತು. ಇವರಲ್ಲಿ 235 ಜನರು ತಮ್ಮನ್ನು ಉಭಯಲಿಂಗ ರತಿಗಳೆಂದು (ಹೆಣ್ಣು, ಗಂಡು ಇಬ್ಬರೊಂದಿಗೂ ಲೈಂಗಿಕ ಚಟುವಟಿಕೆ ನಡೆಸುವವರು) ಹೇಳಿಕೊಂಡಿದ್ದರೆ, 66 ಜನ ತಾವು ಸಲಿಂಗಿಗಳೆಂಬುದನ್ನು ಒಪ್ಪಿಕೊಂಡಿದ್ದಾರೆ.

ಸಮೀಕ್ಷೆಗೊಳಪಟ್ಟ ಹೆಚ್ಚಿನ ವ್ಯಕ್ತಿಗಳು ತಾವು ಸೆಕ್ಸ್ ವಿಚಾರಗಳನ್ನು ತಮ್ಮ ಗೆಳೆಯರ ಮೂಲಕ ಕಲಿಯುತ್ತೇವೆ ಎಂದು ಹೇಳಿದ್ದರೆ, ಇನ್ನು ಕೆಲವರು ತಾವು ಆಶ್ಲೀಲ ವಿಡಿಯೋಗಳ ಮೂಲಕ ‘ಸೆಕ್ಸ್’ ಮಾಹಿತಿಗಳನ್ನು ಕಲಿತುಕೊಳ್ಳುತ್ತಾರೆ ಎಂಬುದು ಈ ಸಮೀಕ್ಷೆಯಿಂದ ಬಯಲಾಗಿದೆ. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಲೈಂಗಿಕ ಶಿಕ್ಷಣ ವಿಚಾರ ಇಲ್ಲವೇ ಇಲ್ಲ ಅನ್ನುವಷ್ಟು ವಿರಳವಾಗಿರುವಾಗ ಸುಮಾರು 30 ಪ್ರತಿಶತದಷ್ಟು ಅಪ್ರಾಪ್ತರು ‘ಸೆಕ್ಸ್’ ಅನ್ನು ಈ ಮೇಲೆ ತಿಳಿಸಿದ ಮೂಲಗಳಿಂದಲೇ ಕಲಿತುಕೊಳ್ಳುತ್ತಾರೆ.

ಇನ್ನು ಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ಪಠ್ಯಕ್ರಮವನ್ನು ಅಳವಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಮಂಡಳಿಯು (NCERT) ಸದ್ಯದಲ್ಲಿಯೇ ಪರಿಷ್ಕೃತ ಪಠ್ಯಕ್ರಮವನ್ನು ಪರಿಚಯಿಸಲಾಗುವುದು ಎಂದು ಜೂನ್ 2018ರಲ್ಲಿ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಈ ಎಲ್ಲಾ ಅಂಶಗಳನ್ನು ಅವಲೋಕಿಸಿದಾಗ ನಮ್ಮ ದೇಶದ ಅಪ್ರಾಪ್ತ ವಯಸ್ಸಿನವರ ಮೇಲೆ ಅಂತರ್ಜಾಲ ಮತ್ತು ಬದಲಾಗಿರುವ ಸಾಮಾಜಿಕ ಸನ್ನಿವೇಶಗಳು ಬಹಳಷ್ಟು ಪ್ರಭಾವವನ್ನು ಬೀರುತ್ತಿವೆ ಎಂಬ ಅಂಶ ಸ್ಪಷ್ಟವಾಗುತ್ತದೆ ಮಾತ್ರವಲ್ಲದೇ ಸಣ್ಣಪ್ರಾಯದಲ್ಲೇ ಮಕ್ಕಳು ಲೈಂಗಿಕ ಆಕರ್ಷಣೆಗೆ ಒಳಗಾಗುತ್ತಿರುವುದರಿಂದ ಲೈಂಗಿಕ ಶಿಕ್ಷಣ ಕುರಿತಾದಂತೆ ಮಕ್ಕಳಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕಾಗಿರುವುದು ಇಂದಿನ ಜರೂರತ್ತಾಗಿದೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.