ಗ್ರೆನೇಡ್ ಪತ್ತೆ : ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಬೆಚ್ಚಿ ಬಿದ್ದ ಪ್ರಯಾಣಿಕರು
ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ, ಪೊಲೀಸರಿಂದ ವ್ಯಾಪಕ ತಪಾಸಣೆ
Team Udayavani, May 31, 2019, 10:24 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ನಗರದ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂಬರ್ 1 ರಲ್ಲಿ ಕಂಟ್ರಿಮೇಡ್ ಗ್ರೆನೇಡ್ ಕಂಡು ಪ್ರಯಾಣಿಕರು ಬೆಚ್ಚಿ ಬಿದ್ದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಗ್ರೆನೇಡ್ ಕಂಡು ಪ್ರಯಾಣಿಕರು ರೈಲ್ವೆ ಸಿಬಂದಿಗೆ ತಿಳಿಸಿದ್ದಾರೆ. ಕೆಲ ಪ್ರಯಾಣಿಕರು ಸ್ಥಳದಿಂದ ದಿಕ್ಕಾಪಾಲಾಗಿ ಓಡಲು ಆರಂಭಿಸಿದರು. ತಕ್ಷಣ ಸ್ಥಳಕ್ಕೆ ರೈಲ್ವೆ ಪೊಲೀಸರು, ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬಂದಿಗಳು ಆಗಮಿಸಿ ಗ್ರೆನೇಡ್ ಮೇಲೆ ಮರಳಿನ ಚಿಲಗಳನ್ನು ಹಾಕಿ ಮುನ್ನೆಚ್ಚರಿಕೆ ವಹಿಸಿದರು.
ಗ್ರೆನೇಡ್ ನಿಷ್ಕ್ರಿಯ ರೀತಿಯಲ್ಲಿದ್ದು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಿಲ್ದಾಣದ ಫ್ಲಾಟ್ ಫಾರಂನಲ್ಲಿದ್ದ ಪ್ರಯಾಣಿಕರನ್ನು ಹೊರಗೆ ಕಳುಹಿಸಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ. ಕೆಲ ರೈಲುಗಳ ಸಂಚಾರ ವಿಳಂಬವಾಗುವ ಸಾಧ್ಯೆಗಳಿವೆ.
ರೈಲುಗಳ ಬೋಗಿಗಳು, ಪ್ರಯಾಣಿಕರ ಬ್ಯಾಗ್ಗಳ ಪರಿಶೀಲನೆ ಮುಂದುವರಿದಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ.
ಸದ್ಯಕ್ಕೆ ಯಾವುದೇ ಅಪಾಯವಿಲ್ಲ. ತನಿಖೆ ನಡೆಸುತ್ತಿದ್ದೇವೆ ಎಂದು ರೈಲ್ವೆಎಡಿಜಿ ಅಲೋಕ್ ಮೋಹನ್ ಹೇಳಿಕೆ ನೀಡಿದ್ದಾರೆ.