ಟ್ರಕ್ ಗೆ ಗುದ್ದಿದ ಕಾರು: ಆರು ಮಕ್ಕಳು ಸೇರಿ 14 ಮಂದಿ ಸ್ಥಳದಲ್ಲೇ ಸಾವು
Team Udayavani, Nov 20, 2020, 7:43 AM IST
ಪ್ರತಾಪ್ ಗಢ್: ಟ್ರಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಕ್ಕಳು ಸೇರಿ 14 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶ ರಾಜ್ಯದ ಪ್ರತಾಪ್ ಗಢ್ ನಲ್ಲಿ ನಡೆದಿದೆ.
ಎಸ್ ಯುವಿ ಕಾರು ಟ್ರಕ್ ಹಿಂಬಾಗಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಎಲ್ಲಾ 14 ಮಂದಿ ಮೃತಪಟ್ಟಿದ್ದಾರೆ.
ಗುರುವಾರ ರಾತ್ರಿ 11.45ರ ಸುಮಾರಿಗೆ ಈ ಅಪಘಾತ ನಡೆದಿದ್ದು, ಪ್ರಯಾಗ್ ರಾಜ್- ಲಕ್ನೋ ಹೆದ್ದಾರಿಯ ದೇಶರಾಜ್ ಇನಾರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ:ಕಾಶ್ಮೀರ ಕಣಿವೆ: ಭಯೋತ್ಪಾದನ ಚಟುವಟಿಕೆಗಳಿಗೆ ಕಡಿವಾಣ
ಟ್ರಕ್ ನ ಟಯರ್ ಪಂಕ್ಷರ್ ಆದ ಕಾರಣ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿತ್ತು. ಈ ವೇಳೆ ವೇಗದಿಂದ ಬಂದ ಕಾರು ಟ್ರಕ್ ಗೆ ಗುದ್ದಿದೆ. ಪರಿಣಾಮ ಕಾರಿನ ಅರ್ಧ ಭಾಗ ಟ್ರಕ್ ನ ಒಳಗೆ ಸಿಲುಕಿಕೊಂಡಿತ್ತು. ಅಪಘಾತದಲ್ಲಿ ಮೃತಪಟ್ಟ ಮಕ್ಕಳು 7ರಿಂದ 15 ವರ್ಷ ವಯಸ್ಸಿನವರು ಎಂದು ಪ್ರತಾಪ್ ಗಢ್ ಎಸ್ ಪಿ ಅನುರಾಗ್ ಆರ್ಯ ಹೇಳಿಕೆ ನೀಡಿದ್ದಾರೆ.
ಕಾರಿನಲ್ಲಿದ್ದವರು ಸಂಬಂಧಿಕರ ಮದುವೆ ಸಮಾರಂಭದಿಂದ ತಮ್ಮ ಗ್ರಾಮಕ್ಕೆ ಮರಳಿ ಬರುತ್ತಿದ್ದರು. ಅಪಘಾತವಾದ ಕೂಡಲೇ ಐವರ ಮೃತದೇಹವನ್ನು ಕಾರಿನಿಂದ ಹೊರತೆಗೆಯಲಾಯ್ತು. ಕಾರು ಟ್ರಕ್ ಒಳಗೆ ಸಿಕ್ಕಿಹಾಕಿಕೊಂಡ ಕಾರಣ ಉಳದವರ ದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ