ಟ್ರಕ್ – ಸ್ಕಾರ್ಪಿಯೋ ವಾಹನದ ಮಧ್ಯೆ ಭೀಕರ ಅಪಘಾತ: ಎಂಟು ಮಂದಿ ದುರ್ಮರಣ, ಮೂವರಿಗೆ ಗಾಯ
Team Udayavani, Mar 11, 2021, 9:44 AM IST
ಆಗ್ರಾ: ಸ್ಕಾರ್ಪಿಯೋ ಎಸ್ ಯುವಿ ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಗುರುವಾರ ಮುಂಜಾನೆ ಆಗ್ರಾ- ಕಾನ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ-2ರ ಆಗ್ರಾದ ಎತ್ಮಾದಪುರ ಪ್ರದೇಶದಲ್ಲಿ ಮುಂಜಾನೆ 5.15ರ ಸುಮಾರಿಗೆ ಈ ಅಪಘಾತ ನಡೆದಿದೆ. ಸ್ಕಾರ್ಪಿಯೋ ಕಾರಿನ ಚಾಲಕ ನಿದ್ದೆಯ ಮಂಪರಿನ ಕಾರಣ ವಾಹನದ ನಿಯಂತ್ರಣ ಕಳೆದುಕೊಂಡ ಕಾರಣ ಅಪಘಾತ ನಡೆದಿದೆ ಎಂದು ವರದಿಗಳು ತಿಳಿಸಿದೆ.
ಇದನ್ನೂ ಓದಿ:ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿದ ಎಂಟರ ಹರೆಯದ ಬಾಲಕ ದಾರುಣ ಬಲಿ!
ಸ್ಕಾರ್ಪಿಯೋ ವಾಹನದಲ್ಲಿ 12 ಜನರು ಪ್ರಯಾಣಿಸುತ್ತಿದ್ದರು. ಎತ್ಮಾದಪುರ ಕಡೆಯಿಂದ ಬರುತ್ತಿದ್ದ ಸ್ಕಾರ್ಪಿಯೋ ಕಾರು ರಸ್ತೆ ವಿಭಜಕದ ಮೇಲೆ ಮತ್ತೊಂದು ಬದಿಯ ರಸ್ತೆಗೆ ಹೋಗಿತ್ತು. ಆ ವೇಳೆ ಆಗ್ರಾ ಕಡೆಯಿಂದ ಬರುತ್ತಿದ್ದ ಟ್ರಕ್ ಗೆ ಢಿಕ್ಕಿ ಹೊಡೆದಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಕಾರ್ಪಿಯೋ ಕಾರು ಜಾರ್ಖಂಡ್ ರಾಜ್ಯದ ನೋಂದಣಿ ಸಂಖ್ಯೆ ಹೊಂದಿದೆ ಎಂದು ಆಗ್ರಾ ಎಸ್ಎಸ್ ಪಿ ಬಬ್ಲು ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ಸಾರಿಗೆ ನೌಕರರಿಗೆ ಶಿವರಾತ್ರಿ ಸಂಭ್ರಮ! ಅಂತರ್ ನಿಗಮಗಳ ವರ್ಗಾವಣೆಗೆ ಅಸ್ತು
ಅಪಘಾತದ ರಭಸಕ್ಕೆ ಸ್ಕಾರ್ಪಿಯೋ ನಜ್ಜುಗುಜ್ಜಾಗಿದೆ. ಟ್ರಕ್ ಕೂಡಾ ತಿರುಗಿ ನಿಂತಿದೆ. ಅಪಘಾತದವಾದ ಕೂಡಲೇ ಸ್ಥಳೀಯರು ಕಾರಿನಲ್ಲಿ ಸಿಲುಕಿದವರ ರಕ್ಷಣೆಗೆ ಧಾವಿಸಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಎಂಟು ಮಂದಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ