ವಾಜಪೇಯಿ ಪಾರ್ಥಿವ ಶರೀರದ ದರ್ಶನಕ್ಕೆ ಬಂದ ಅಗ್ನಿವೇಶ್ ಮೇಲೆ ಹಲ್ಲೆ
Team Udayavani, Aug 17, 2018, 1:34 PM IST
ನವದೆಹಲಿ:ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಹೊರಟಿದ್ದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿ ನಡೆದಿದೆ.
ವಾಜಪೇಯಿ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲು ತಡೆಯೊಡ್ಡಿ, ವಿರೋಧ ವ್ಯಕ್ತಪಡಿಸಿದ ಗುಂಪು ಸ್ವಾಮಿ ಅಗ್ನಿವೇಶ್ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಡಿಯೋದಲ್ಲಿ ಸೆರೆಯಾಗಿದೆ. ಒಂದು ಹಂತದಲ್ಲಿ ಅವರನ್ನು ಓಡಿಸಿಕೊಂಡು ಹೋಗುತ್ತಿದ್ದಾಗ ಮಹಿಳೆಯೊಬ್ಬಳು ಚಪ್ಪಲಿಯನ್ನು ಕೈಯಲ್ಲಿ ಹಿಡಿದು ಹೊಡೆಯಲು ಮುನ್ನುಗ್ಗುತ್ತಿರುವುದು ಕೂಡಾ ವಿಡಿಯೋದಲ್ಲಿದೆ.
ಕೊನೆಗೂ ವಾಜಪೇಯಿ ಅವರ ಪಾರ್ಥಿವ ಶರೀರದ ದರ್ಶನ ಪಡೆಯದೆ ಸ್ವಾಮಿ ಅಗ್ನಿವೇಶ್ ಅವರು ವಾಪಸ್ ತೆರಳಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.
ಕಳೆದ ತಿಂಗಳು ಲಿಟ್ಟಿಪಾರಾ ಮೈದಾನದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ವಾಮಿ ಅಗ್ನಿವೇಶ್ ಮೇಲೆ ಜಾರ್ಖಂಡ್ ನ ಪಾಕುರ್ ಭಾರತೀಯ ಜನತಾ ಯುವ ಮೋರ್ಚಾ ಕಾರ್ಯಕರ್ತರ ಗುಂಪು ಹಲ್ಲೆ ನಡೆಸಿರುವ ಘಟನೆ ನಡೆದಿತ್ತು. ಇದು ಉದ್ದೇಶಪೂರ್ವಕದ ಹಲ್ಲೆ ಎಂದು ಸ್ವಾಮಿ ಅಗ್ನಿವೇಶ್ ಬಳಿಕ ಪ್ರತಿಕ್ರಿಯೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು