ಸ್ವಾಮಿ v/s ರಜನಿ: ನನ್ನಲ್ಲಿ ಹಣಕಾಸು ಅವ್ಯವಹಾರದ ದಾಖಲೆ ಇದೆ!
Team Udayavani, Jun 24, 2017, 11:15 AM IST
ಹೊಸದಿಲ್ಲಿ: ರಜನಿಕಾಂತ್ ಅವರಿಗೆ ರಾಜಕೀಯದ ಗಂಧಗಾಳಿ ಗೊತ್ತಿಲ್ಲ. ಅವರು ರಾಜಕೀಯ ಪ್ರವೇಶ ಮಾಡುವುದು ಬೇಡ.ಅವರ ಹಣಕಾಸು ಅವ್ಯವಹಾರದ ದಾಖಲೆಗಳು ನನ್ನ ಬಳಿ ಇದೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸೂಪರ್ಸ್ಟಾರ್ ರಜನಿಕಾಂತ್ ಅವರು ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿರುವ ವೇಳೆಯಲ್ಲಿ ಸ್ವಾಮಿ ಅವರು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿ ತಲ್ಲಣ ಸೃಷ್ಟಿಸಿದ್ದಾರೆ.
‘ರಜನಿಕಾಂತ್ ಅವರ ಹಣಕಾಸು ಅವ್ಯವಹಾರದ ದಾಖಲೆಗಳು ನನ್ನ ಬಳಿ ಇವೆ. ಅದನ್ನು ಬಿಡುಗಡೆ ಮಾಡಿದರೆ ಅವರ ರಾಜಕೀಯ ಪ್ರವೇಶದ ಮಹತ್ವಾಕಾಂಕ್ಷೆ ನುಚ್ಚು ನೂರಾಗಲಿದೆ’ ಎಂದು ಸ್ವಾಮಿ ಹೇಳಿದ್ದಾರೆ.
ನಿಮ್ಮ ಈಗಿರುವ ಇಮೇಜ್ ಹಾಳಾಗಲಿದೆ ಯಾವುದೇ ಕಾರಣಕ್ಕೆ ರಾಜಕೀಯಕ್ಕೆ ಬರಬೇಡಿ ಎಂದು ಎಚ್ಚರಿಕೆ ನೀಡಿದರು.
ಈ ಹಿಂದೆ ರಜನಿಕಾಂತ್ ತಮಿಳಿಗನೇ ಅಲ್ಲ ಅವರಿಗೆ ತಮಿಳು ನಾಡಿನ ಮುಖ್ಯಮಂತ್ರಿಯಾಗುವ ಅರ್ಹತೆ ಇಲ್ಲ ಎಂದು ಮೇರು ನಟನ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!