CET ದಿನ ಪ್ರಮಾಣವಚನ: ಸಿದ್ದರಾಮಯ್ಯಗೆ ಬಿ.ಎಲ್.ಸಂತೋಷ್ ತಿರುಗೇಟು
ಪ್ರಧಾನಿ ರೋಡ್ ಶೋ ದಿನ ಸಿದ್ದರಾಮಯ್ಯ ಮಾಡಿದ ಟ್ವೀಟ್ ಉಲ್ಲೇಖ
Team Udayavani, May 19, 2023, 4:31 PM IST
ಬೆಂಗಳೂರು: ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಟ್ವೀಟ್ ಮೂಲಕ ಶನಿವಾರ ನಡೆಯಲಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಿರುಗೇಟು ನೀಡಿದ್ದಾರೆ.
”ನಮ್ಮ ನಿಯೋಜಿತ ಸಿಎಂ ಈ ಟ್ವೀಟ್ ಮಾಡಿ ಹಲವು ದಿನಗಳು ಕಳೆದಿಲ್ಲ.ನಾಳೆ ರಾಜ್ಯ ಮತ್ತು ಬೆಂಗಳೂರಿನಾದ್ಯಂತ ಸಿಇಟಿ ಪರೀಕ್ಷೆಗಳು. ನಿಮ್ಮ ಪ್ರಮಾಣ ವಚನ ಸ್ವೀಕಾರವನ್ನು ಒಂದೆರೆಡು ದಿನ ಮುಂದೂಡಿದ್ದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರಲಿಲ್ಲ.” ಎಂದು ಸಂತೋಷ್ ಅವರು ಟ್ವೀಟ್ ಮಾಡಿದ್ದಾರೆ.
Not many days has passed after our designate CM tweeted this . Tomorrow is CET exams across state & Bengaluru. What would have happened Sri @siddaramaiah & Sri @DKShivakumar if your oath taking was deferred by a day or two so that students will not be troubled . https://t.co/IXqrvAaGjp
— B L Santhosh (@blsanthosh) May 19, 2023
”ನೀಟ್ ಪರೀಕ್ಷಾರ್ಥಿಗಳು ಮತ್ತು ಬೆಂಗಳೂರಿನ ಜನರ ವಿರೋಧವನ್ನು ಧಿಕ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಅತ್ಯಂತ ಬೇಜವಾಬ್ದಾರಿತನದ ನಡೆ. ಮೋದಿ ಅವರು ಪ್ರಚಾರ ಮಾಡಲಿ ನಮ್ಮ ತಕರಾರು ಇಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಯಾರು ಹೊಣೆ?” ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!