ಕೋಲ್ಕತಾದಲ್ಲಿ ಸಿಡ್ನಿಯಿಂದ ಬಂದ ವಿಮಾನ ತುರ್ತು ಲ್ಯಾಂಡಿಂಗ್
Team Udayavani, Aug 25, 2022, 3:45 PM IST
ಕೋಲ್ಕತಾ: ಸಿಡ್ನಿಯಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವನ್ನು 50 ವರ್ಷದ ಪ್ರಯಾಣಿಕರೊಬ್ಬರು ಉಸಿರಾಟದ ತೊಂದರೆ ಕುರಿತು ಹೇಳಿಕೊಂಡ ನಂತರ ಬುಧವಾರ ಕೋಲ್ಕತಾದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
159 ಪ್ರಯಾಣಿಕರಿದ್ದ ವಿಮಾನವು ರಾಷ್ಟ್ರ ರಾಜಧಾನಿಗೆ ಹೊರಡುವ ಮೊದಲು ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಗಂಟೆಗಳ ಕಾಲ ಸಂಜೆ 4.50 ರಿಂದ 6.50 ರವರೆಗೆ ಇತ್ತು. ಆರೋಗ್ಯ ಸಮಸ್ಯೆ ಕಂಡು ಬಂದ ಪ್ರಯಾಣಿಕರನ್ನು ಕೋಲ್ಕತಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.