ಮಕ್ಕಳ ಸಾವು; ಕಫದ ಸಿರಪ್ ಕುರಿತು ತನಿಖೆ ಆರಂಭ
Team Udayavani, Oct 7, 2022, 7:50 AM IST
ಹೊಸದಿಲ್ಲಿ: ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಭಾರತದ ಕಂಪೆನಿ ತಯಾರಿಸಿದ ಕಫದ ಸಿರಪ್ ಕಾರಣ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಎಚ್ಚರಿಸಿದ ಬೆನ್ನಲ್ಲೇ ಭಾರತದ ಔಷಧ ನಿರ್ದೇಶನಾಲಯವು ಈ ಕುರಿತು ತನಿಖೆ ಆರಂಭಿಸಿದೆ.
ಹರಿಯಾಣದ ಸೋನೆಪತ್ ಮೂಲದ ಮೈಡೆನ್ ಫಾರ್ಮಾಸುಟಿಕಲ್ಸ್ ಲಿ.ನಲ್ಲಿ ತಯಾರಿಸಲಾದ ವಿಷಪೂರಿತ, ಕಳಪೆ ಗುಣಮಟ್ಟದ 4 ಬಗೆಯ ಕೆಮ್ಮು ನಿವಾರಕ ಸಿರಪ್ನಿಂದಾಗಿಯೇ ಪಶ್ಚಿಮ ಆಫ್ರಿಕಾದ ದೇಶದಲ್ಲಿ ಮೂತ್ರಕೋಶ ಸಮಸ್ಯೆ ಉಂಟಾಗಿ 66 ಮಕ್ಕಳು ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಬುಧವಾರ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಎಚ್ಚರಿಸಿತ್ತು.
ಪ್ರೋಮೆಥಝೈನ್ ಓರಲ್ ಸೊಲ್ಯೂಷನ್, ಕಾಫೆಕ್ಸ್ಮೆಲಿನ್ ಬೇಬಿ ಕಾಫ್ ಸಿರಪ್, ಮೇಕಾಫ್ ಬೇಬಿ ಕಾಫ್ ಸಿರಪ್ ಮತ್ತು ಮ್ಯಾಗ್ರಿಪ್ ಎನ್ ಕೋಲ್ಡ್ ಸಿರಪ್ ಎಂಬ ನಾಲ್ಕು ಸಿರಪ್ಗ್ಳಲ್ಲಿ ಸ್ವೀಕಾರಾರ್ಹವಲ್ಲದಷ್ಟು ಪ್ರಮಾಣದಲ್ಲಿ ಡೈಥಿಲೀನ್ ಗ್ಲೆ„ಕೋಲ್ ಮತ್ತು ಇಥೈಲೀನ್ ಗ್ಲೆ„ಕೋಲ್ ಇರುವುದು ಕಂಡುಬಂದಿತ್ತು. ಈ ಅಂಶಗಳು ಮಾರಣಾಂತಿಕವಾಗಿದ್ದು, ಇದನ್ನು ಸೇವಿಸಿದರೆ ಕಿಡ್ನಿ ಹಾಗೂ ನರಸಂಬಂಧಿ ಸಮಸ್ಯೆ ಉಂಟಾಗುತ್ತದೆ. ಡಬ್ಲ್ಯುಎಚ್ಒ ಸೂಚನೆ ಬೆನ್ನಲ್ಲೇ, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯು ಪ್ರಕರಣದ ಬಗ್ಗೆ ತುರ್ತು ತನಿಖೆ ಆರಂಭಿಸಿದೆ. ಇದೇ ವೇಳೆ, ಸ್ಯಾಂಪಲ್ಗಳನ್ನು ಕೋಲ್ಕತಾಕ್ಕೆ ಪರೀಕ್ಷೆಗೆ ಕಳುಹಿಸಲಾಗಿದ್ದು, 2 ದಿನಗಳಲ್ಲಿ ವರದಿ ಬರುವ ಸಾಧ್ಯತೆಯಿದೆ ಎಂದಿದೆ ಕಂಪೆನಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ