ಗಣತಂತ್ರ; ರಾಜಪಥದಲ್ಲಿ ಎಲ್ಲರ ಕಣ್ಮನ ಸೆಳೆದ ಕರ್ನಾಟಕದ ಸ್ತಬ್ಧಚಿತ್ರ
Team Udayavani, Jan 26, 2017, 1:43 PM IST
ನವದೆಹಲಿ: ಈ ಬಾರಿ ನವದೆಹಲಿಯ ರಾಜಪಥ್ ನಲ್ಲಿ ನಡೆದ 68ನೇ ಗಣರಾಜ್ಯೋತ್ಸವ ಸಮಾರಂಭದ ಪಥ ಸಂಚಲನದಲ್ಲಿ ಜಾನಪದ ನೃತ್ಯ ಪ್ರಕಾರಗಲ ಸ್ತಬ್ಧಚಿತ್ರ ಪ್ರದರ್ಶನಗೊಂಡು ಎಲ್ಲರ ಗಮನಸೆಳೆಯಿತು. ಈ ಸ್ತಬ್ಧ ಚಿತ್ರದಲ್ಲಿ ವೀರಗಾಸೆ, ಕಂಸಾಳೆ, ಗೊರವರ ಕುಣಿತ, ಡೊಳ್ಳು ಕುಣಿತ, ಜಗ್ಗಲಗೆ, ದಾಸರಪದ, ನಂದಿಧ್ವಜದಂತಹ ಸಾಂಪ್ರದಾಯಿಕ ಜಾನಪದ ಪ್ರಕಾರಗಳು ಸ್ತಬ್ಧ ಚಿತ್ರದಲ್ಲಿ ಇದ್ದವು.
ಇದಕ್ಕಾಗಿ ರಾಜ್ಯದಿಂದ ಕಲಾವಿದರನ್ನು ಆಯ್ಕೆ ಮಾಡಿ ಕಳೆದ 15 ದಿನಗಳಿಂದ ಅಭ್ಯಾಸ ಮಾಡಲಾಗಿತ್ತು. ಕಲಾವಿದರು ತಾಳಕ್ಕೆ ಕುಣಿಯುತ್ತಾ ಸಂಸ್ಕೃತಿಯನ್ನು ಬಿಂಬಿಸಿದರು.
ರಾಜ್ಯದ ಪ್ರಸಿದ್ಧ ಕಲಾವಿದರಾದ ಶಶಿಧರ ಅಡಪ ಅವರ ಕೈಚಳಕದಲ್ಲಿ ರಾಜ್ಯದ ಸ್ತಬ್ಧಚಿತ್ರ ನಿರ್ಮಾಣವಾಗಿದ್ದು, ಒಂದು ತಿಂಗಳಿಂದ 25ಕ್ಕೂ ಹೆಚ್ಚು ಕಾರ್ಮಿಕರು ಇದಕ್ಕಾಗಿ ಕೆಲಸ ನಿರ್ವಹಿಸಿದ್ದರು. ವಿ. ಮನೋಹರ್ ಸ್ತಬ್ಧಚಿತ್ರಕ್ಕೆ ಹಿನ್ನೆಲೆ ಸಂಗೀತ, ಅಮರೇಶ್ ದೊಡ್ಡಮನಿ ಕಲಾವಿದರ ಉಸ್ತುವಾರಿ ನಡೆಸಿದ್ದಾರೆ. ಸ್ತಬ್ಧಚಿತ್ರದಲ್ಲಿ ಗೊರವರ ಕುಣಿತದ ಪ್ರತಿಮೆ ಎಲ್ಲಕ್ಕಿಂತ ದೊಡ್ಡದಾಗಿ ಬಿಂಬಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ