ಮುಂಬೈ, ಪಠಾಣ್ ಕೋಟ್ ದಾಳಿ ರೂವಾರಿ ವಿರುದ್ಧ ಕ್ರಮ ತೆಗೆದುಕೊಳ್ಳಿ: ಪಾಕ್ ಗೆ ಭಾರತ, ಅಮೆರಿಕ
2008ರಲ್ಲಿ ನಡೆದಿದ್ದ ಮುಂಬೈ ಭಯೋತ್ಪಾದನಾ ದಾಳಿಯಲ್ಲಿ 170ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರು.
Team Udayavani, Sep 11, 2020, 12:35 PM IST
ನವದೆಹಲಿ:26/11 ಮುಂಬೈ ಭಯೋತ್ಪಾದಕ ದಾಳಿ ಹಾಗೂ ಪಠಾಣ್ ಕೋಟ್ ಉಗ್ರ ದಾಳಿಯ ಹಿಂದಿನ ರೂವಾರಿಗಳ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳಬೇಕೆಂದು ಭಾರತ ಮತ್ತು ಅಮೆರಿಕ ಸ್ಪಷ್ಟ ಸಂದೇಶ ರವಾನಿಸುವ ಮೂಲಕ ತಮ್ಮ ನೆಲದಲ್ಲಿ ಉಗ್ರಗಾಮಿ ಸಂಘಟನೆಗಳಿಗೆ ಅವಕಾಶ ಇಲ್ಲ ಎಂಬುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದೆ.
ಭಾರತ, ಅಮೆರಿಕ ಭಯೋತ್ಪಾದಕ ನಿಗ್ರಹ ಕಾರ್ಯಪಡೆ ಜಂಟಿಯಾಗಿ ನೀಡಿರುವ ಪ್ರಕಟಣೆಯಲ್ಲಿ, ತಮ್ಮ ನೆಲದಲ್ಲಿ ಭಯೋತ್ಪಾದಕರಿಗೆ ಯಾವುದೇ ಅವಕಾಶ ಇಲ್ಲ ಎಂಬುದನ್ಉ ಸಾಬೀತುಪಡಿಸಲು ಪಾಕಿಸ್ತಾನ ತಕ್ಷಣವೇ ಉಗ್ರರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ. ಅಲ್ಲದೇ 26/11 ಮುಂಬೈ ಹಾಗೂ ಪಠಾಣ್ ಕೋಟ್ ದಾಳಿಯ ರೂವಾರಿಗಳ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಮುಂದುವರಿದ ಮಳೆ: ಹಲವು ಪ್ರದೇಶಗಳು ಜಲಾವೃತ, ಕುಸಿದ ರಸ್ತೆ
2008ರಲ್ಲಿ ನಡೆದಿದ್ದ ಮುಂಬೈ ಭಯೋತ್ಪಾದನಾ ದಾಳಿಯಲ್ಲಿ 170ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರು. ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆ ಈ ದಾಳಿಯ ಸಂಚು ರೂಪಿಸಿತ್ತು. ಈ ಘಟನೆ ನಂತರ ಭಯೋತ್ಪಾದನೆ ವಿರುದ್ಧ ಭಾರತ ಮತ್ತು ಅಮೆರಿಕ ಜಂಟಿಯಾಗಿ ಹೋರಾಡಲು ನಿರ್ಧರಿಸಿದ್ದವು.
ಗಡಿ ಸೇರಿದಂತೆ ಎಲ್ಲಾ ರೀತಿಯ ಭಯೋತ್ಪಾದಕ ಕೃತ್ಯಗಳನ್ನು ಬಲವಾಗಿ ಖಂಡಿಸಲು ಉಭಯ ದೇಶಗಳ ಮಾತುಕತೆ ವೇಳೆ ಪ್ರಸ್ತಾಪಿಸಲಾಗಿತ್ತು. ಅಲ್ಲದೇ ಆಲ್ ಖೈದಾ, ಐಸಿಸ್, ಪಾಕಿಸ್ತಾನ ಮೂಲದ ಲಷ್ಕರ್, ಜೈಷ್ ಎ ಮೊಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದವು.
ದೇವಸ್ಥಾನದ ಆವರಣದಲ್ಲಿ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ: ಹುಂಡಿ ದೋಚಿ ಪರಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ
Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್ ಟವರ್ ಹತ್ತಿದ ಯುವಕ