ಕ್ಷೇತ್ರದತ್ತ ಗಮನವಿರಲಿ: ಕಾರ್ತಿಗೆ ಕೋರ್ಟ್
Team Udayavani, May 30, 2019, 6:00 AM IST
ಹೊಸದಿಲ್ಲಿ: ವಿದೇಶ ಪ್ರವಾಸಕ್ಕೆ ಅನುಮತಿ ನೀಡುವಾಗ ಕೋರ್ಟ್ನ ರಿಜಿಸ್ಟ್ರಿಯಲ್ಲಿ ಠೇವಣಿ ಇರಿಸಿದ್ದ 10 ಕೋಟಿ ರೂ.ಗಳನ್ನು ವಾಪಸ್ ನೀಡುವಂತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ. ಜೊತೆಗೆ, “ನೀವು ನಿಮ್ಮ ಲೋಕಸಭಾ ಕ್ಷೇತ್ರದ ಕಡೆಗೆ ಗಮನ ವಹಿಸಿ’ ಎಂಬ ಸಲಹೆಯನ್ನೂ ನ್ಯಾಯಪೀಠ ನೀಡಿದೆ. ಹಣಕಾಸು ಅಕ್ರಮ ಪ್ರಕರಣ ಸಂಬಂಧ ಕಾರ್ತಿ ವಿಚಾರಣೆ ಎದುರಿಸುತ್ತಿದ್ದಾರೆ. ವಿದೇಶ ಪ್ರವಾಸಕ್ಕೆ ಅನು ಮತಿ ಕೋರಿ ಈ ಹಿಂದೆ ಕಾರ್ತಿ ಅರ್ಜಿ ಸಲ್ಲಿಸಿದ್ದರು. ಅನುಮತಿ ನೀಡಿದ್ದ ಕೋಟ್ 10 ಕೋಟಿ ರೂ.ಗಳನ್ನು ಠೇವಣಿ ಇಡುವಂತೆ ಸೂಚಿಸಿತ್ತು. ಅದರಂತೆ, ಠೇವಣಿ ಇರಿಸಿದ್ದರು. ಆದರೆ, ತಾವು ಆ 10 ಕೋಟಿ ರೂ.ಗಳನ್ನು ಬೇರೊಬ್ಬರಿಂದ ಸಾಲವಾಗಿ ಪಡೆದಿದ್ದು, ಅದನ್ನು ಮರುಪಾವತಿಸಬೇಕಾಗಿದೆ. ಅದನ್ನು ವಾಪಸ್ ನೀಡಿ ಎಂದು ಕಾರ್ತಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು