ಧರ್ಮವನ್ನು ಲೆಕ್ಕಿಸದೆ ದ್ವೇಷ ಭಾಷಣಗಳ ವಿರುದ್ದ ಕ್ರಮ ಕೈಗೊಳ್ಳಿ: ಸುಪ್ರೀಂ
ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರಕಾರಗಳಿಗೆ ಸೂಚನೆ
Team Udayavani, Oct 21, 2022, 7:09 PM IST
ನವದೆಹಲಿ : ದ್ವೇಷದ ಭಾಷಣಗಳನ್ನು ಅತ್ಯಂತ ಗಂಭೀರ ವಿಷಯ ಎಂದು ಕರೆಡಿರುವ ಸುಪ್ರೀಂ ಕೋರ್ಟ್ ಶುಕ್ರವಾರ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರಕಾರಗಳಿಗೆ ದೂರು ಸಲ್ಲಿಸುವ ವರೆಗೆ ಕಾಯದೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ನಿರ್ದೇಶಿಸಿದೆ.
ಆಡಳಿತದ ಕಡೆಯಿಂದ ಯಾವುದೇ ವಿಳಂಬವು ನ್ಯಾಯಾಲಯದ ನಿಂದನೆಯನ್ನು ಆಹ್ವಾನಿಸುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ. ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರ ಪೀಠವು ಶಾಹೀನ್ ಅಬ್ದುಲ್ಲಾ ಎಂಬ ವ್ಯಕ್ತಿ ಸಲ್ಲಿಸಿದ ಅರ್ಜಿಯ ಮೇರೆಗೆ ಎರಡು ರಾಜ್ಯ ಸರಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ರಾಷ್ಟ್ರದ ಜಾತ್ಯತೀತ ರಚನೆಯನ್ನು ಕಾಪಾಡಲು ಅವರ ಧರ್ಮವನ್ನು ಲೆಕ್ಕಿಸದೆ ದ್ವೇಷದ ಭಾಷಣಗಳನ್ನು ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ