ತಲಾಖ್ಗೆ ಸಿಗುತ್ತಾ ಮೇಲ್ಮನೆ ಸಮ್ಮತಿ?
Team Udayavani, Dec 31, 2018, 12:30 AM IST
ಹೊಸದಿಲ್ಲಿ: ರಾಜಕೀಯವಾಗಿ ಭಾರೀ ಮಹತ್ವ ಪಡೆದಿರುವ ತ್ರಿವಳಿ ತಲಾಖ್ ಮಸೂದೆಯು ಸೋಮವಾರ ರಾಜ್ಯಸಭೆಯಲ್ಲಿ ಚರ್ಚೆಗೆ ಬರಲಿರುವುದರಿಂದ ಬಿಜೆಪಿ ಮತ್ತು ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸೋಮವಾರದ ಸಂಸತ್ ಕಲಾಪಕ್ಕೆ ಯಾರೂ ಗೈರಾಗದಂತೆ ಕಾಂಗ್ರೆಸ್ ಹಾಗೂ ಬಿಜೆಪಿ, ತಮ್ಮ ಸಂಸದರಿಗೆ ವಿಪ್ ಜಾರಿಗೊಳಿಸಿವೆ. ಮಸೂದೆ ಮಂಡನೆಯ ಮೇಲುಸ್ತುವಾರಿ ವಹಿಸಿಕೊಂಡಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಮುಸ್ಲಿಂ ಮಹಿಳೆಯರ ವಿವಾಹ ಹಕ್ಕುಗಳನ್ನು ಸಂರಕ್ಷಿಸುವ ಸದುದ್ದೇಶದಿಂದ ಸಿದ್ಧಪಡಿಸಲಾಗಿರುವ ಈ ಮಸೂದೆ ವಿಚಾರದಲ್ಲಿ ರಾಜಕೀಯ ಸಲ್ಲದು ಎಂದಿದ್ದಾರೆ.
ರಾಜ್ಯಸಭೆಯಲ್ಲಿ ಸವಾಲು: ಗುರುವಾರ ವಷ್ಟೇ ಲೋಕಸಭೆಯಲ್ಲಿ ಈ ಮಸೂದೆ ಅಂಗೀಕಾರಗೊಂಡಿದ್ದು, ರಾಜ್ಯಸಭೆಯಲ್ಲಿ ಅಂಗೀಕಾರವಾಗುವುದು ಅನಿವಾರ್ಯ. 2017ರಲ್ಲೂ ಈ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡು ರಾಜ್ಯಸಭೆಯಲ್ಲಿ ತಿರಸ್ಕೃತಗೊಂಡಿತ್ತು. ಈಗ ರಾಜ್ಯಸಭೆಯಲ್ಲಿ ಇದನ್ನು ಶತಾಯ ಗತಾಯ ಅಂಗೀಕಾರಗೊಳಿಸಲು ಬಿಜೆಪಿ ಶತಪ್ರಯತ್ನ ಮಾಡುತ್ತಿದೆ. ಗುರುವಾರ, ಲೋಕಸಭೆಯಲ್ಲಿ ಈ ಮಸೂದೆ ಮಂಡನೆಯಾದಾಗಲೇ ಕಾಂಗ್ರೆಸ್ ಇದನ್ನು ವಿರೋಧಿಸಿತ್ತು. ಹಾಗಾಗಿ, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳಿಂದ ಮಸೂದೆಗೆ ರಾಜ್ಯಸಭೆಯಲ್ಲಿ ವಿರೋಧ ವ್ಯಕ್ತವಾಗುವುದು ಸ್ಪಷ್ಟವಾಗಿದೆ. ಈ ನಡುವೆ, ಇದೇ ಸಂಸತ್ ಅಧಿವೇಶನದ ವೇಳೆಯಲ್ಲೇ ಮಂಡನೆಯಾಗ ಬೇಕಿದ್ದ ಪೌರತ್ವ ಮಸೂದೆಯ ಅಂತಿಮ ಕರಡು ಪ್ರತಿ ಇನ್ನೂ ಸಿದ್ಧವಾಗದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಚರ್ಚೆಗೆ ಬರುವುದು ಅನುಮಾನ ಎಂದು ಹೇಳಲಾಗಿದೆ.
ಬಲಾಬಲ ಸ್ಥಿತಿ
ಒಟ್ಟು 245 ಸ್ಥಾನಗಳಿರುವ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರವಾಗಲು ಶೇ. 50ರಷ್ಟು ಮತ ಅಂದರೆ, 123 ಮತಗಳು ಬೇಕು. ಕಾಂಗ್ರೆಸ್ ಮಿತ್ರ ಪಕ್ಷಗಳ ಬಲಾಬಲ 155 ಇದೆ. ಬಿಜೆಪಿ ನೇತೃತ್ವದ ಎನ್ಡಿಎ ಬಲ 89 ಇದ್ದು, ಮಸೂದೆ ಅಂಗೀಕಾರಕ್ಕೆ 38 ಮತಗಳ ಕೊರತೆಯನ್ನು ಆ ಪಕ್ಷ ಎದುರಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Sandalwood: ಗಾಡ್ ಪ್ರಾಮಿಸ್ಗೆ ಸ್ಕ್ರಿಪ್ಟ್ ಪೂಜೆ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ