ತ್ರಿವಳಿ ತಲಾಖ್‌ ವಿರೋಧಿ  ಕೂಗಿಗೆ ಮೋದಿ ಬೆಂಬಲ


Team Udayavani, Apr 17, 2017, 9:19 AM IST

17-BIG-1.jpg

ಭುವನೇಶ್ವರ/ಲಕ್ನೋ: ಮುಸ್ಲಿಮರಲ್ಲಿ ಜಾರಿಯಲ್ಲಿರುವ ತ್ರಿವಳಿ ತಲಾಖ್‌ ಪ್ರಕ್ರಿಯೆಯು ವಿವಾದಕ್ಕೀಡಾಗಿರುವ ಸಂದರ್ಭ ದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರೂ ಈ ಕುರಿತು ಧ್ವನಿಯೆತ್ತಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲೇ ತ್ರಿವಳಿ ತಲಾಖ್‌ ಬಗ್ಗೆ ಪ್ರಸ್ತಾವಿಸಿರುವ ಅವರು, “ಮುಸ್ಲಿಂ ಮಹಿಳೆ ಯರಿಗೆ ನ್ಯಾಯ ಒದಗಿಸುವ ಕೆಲಸ ನಡೆಯ ಬೇಕು’ ಎಂದು ಪ್ರತಿಪಾದಿಸಿದ್ದಾರೆ.

ಇನ್ನೊಂದೆಡೆ ಪ್ರಧಾನಿ ಹೇಳಿಕೆ ಬೆನ್ನಲ್ಲೇ ಲಕ್ನೋದಲ್ಲಿ ಮಾತನಾಡಿ ರುವ ಅಖೀಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಪ್ರಧಾನ ಕಾರ್ಯದರ್ಶಿ ಮೌಲಾನಾ ವಾಲಿ ರೆಹಮಾನಿ, “ವೈಯಕ್ತಿಕ ಕಾನೂನಿನಲ್ಲಿ ಬದಲಾವಣೆ ತರುವುದಕ್ಕೆ ಬಹುತೇಕ ಮುಸ್ಲಿಮರ ವಿರೋಧವಿದೆ. ಮುಸ್ಲಿಂ ವೈಯಕ್ತಿಕ ಕಾನೂನನ್ನು ಅನುಷ್ಠಾನ ಮಾಡುವುದು ನಮಗೆ ಸಾಂವಿಧಾನಿಕವಾಗಿ ಬಂದಿರುವ ಹಕ್ಕು. ಹಾಗಾಗಿ ಶರಿಯಾ ಕಾನೂನಿನಲ್ಲಿ ಮೂರನೆಯವರ ಹಸ್ತಕ್ಷೇಪಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಅದನ್ನು ನಾವು ಸಹಿಸುವುದೂ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಇದರ ಜತೆಗೆ ಇನ್ನು ಮುಂದೆ ಶರಿಯಾದಲ್ಲಿ ಹೇಳಿರುವಂತೆ, ಸಕಾರಣಗಳನ್ನು ಕೊಡದೆ ಪತ್ನಿಗೆ ತ್ರಿವಳಿ ತಲಾಖ್‌ ನೀಡುವ ವ್ಯಕ್ತಿಗೆ ಸಾಮಾಜಿಕ ಬಹಿಷ್ಕಾರ ಹಾಕಲು ಹಾಗೂ ದಂಡ ವಿಧಿಸಲು ಅಖೀಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧರಿಸಿರುವುದಾಗಿಯೂ ಅವರು ತಿಳಿಸಿದ್ದಾರೆ.

ಕಳೆದ ಅ.7ರಂದು ಕೇಂದ್ರ ಸರಕಾರವು ತ್ರಿವಳಿ ತಲಾಖ್‌, ನಿಕಾಹ್‌ ಹಲಾಲಾ ಮತ್ತು ಬಹುಪತ್ನಿತ್ವವನ್ನು  ವಿರೋಧಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಲಿಂಗ ಸಮಾನತೆ ಮತ್ತು ಜಾತ್ಯತೀತತೆಯ ಆಧಾರದಲ್ಲಿ ಈ ಪದ್ಧತಿಗಳನ್ನು ಪರಿಶೀಲಿಸಬೇಕು ಎಂದು ನ್ಯಾಯಾ ಲಯಕ್ಕೆ ಮನವಿ ಸಲ್ಲಿಸಿತ್ತು. ಇನ್ನೊಂದೆಡೆ, ತ್ರಿವಳಿ ತಲಾಖ್‌ನಿಂದ ನೊಂದಿದ್ದ ಕೆಲವು ಮಹಿಳೆಯರೂ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಇದನ್ನು ಖಂಡಿಸಿದ್ದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಮುಸ್ಲಿಮರ ವೈಯಕ್ತಿಕ ಕಾನೂನಿನಲ್ಲಿ ಹಸ್ತಕ್ಷೇಪ ಮಾಡಲು ಬಿಡುವುದಿಲ್ಲ ಎಂದಿತ್ತು.

ತ್ರಿವಳಿ ತಲಾಖ್‌: ಬಹಿಷ್ಕಾರ, ದಂಡ
ಲಕ್ನೋದಲ್ಲಿ ಮಾತನಾಡಿರುವ ಮೌಲಾನಾ ವಾಲಿ ರೆಹಮಾನಿ, “ತ್ರಿವಳಿ ತಲಾಖ್‌ ವಿಚಾರದಲ್ಲಿ ಕೆಲವೊಂದು ತಪ್ಪು ತಿಳಿವಳಿಕೆಗಳಿವೆ. ಅಪರೂಪದಲ್ಲಿ ಅಪರೂಪದ ಪ್ರಕರಣಗಳಲ್ಲಿ ಮಾತ್ರವೇ ತ್ರಿವಳಿ ತಲಾಖ್‌ಗೆ ಅವಕಾಶವಿರುತ್ತದೆ. ಹಾಗಾಗಿ ಯಾರು ಸರಿಯಾದ ಕಾರಣಗಳನ್ನು ನೀಡದೆ ಅಥವಾ ತಮ್ಮಿಚ್ಛೆಗೆ ಅನುಸಾರವಾಗಿ ಪತ್ನಿಗೆ ತಲಾಖ್‌ ನೀಡುತ್ತಾರೋ ಅಂಥವರಿಗೆ ಸಾಮಾಜಿಕ ಬಹಿಷ್ಕಾರ ಹಾಕುವ ಹಾಗೂ ದಂಡ ವಿಧಿಸುವ ನಿರ್ಧಾರ ಕೈಗೊಂಡಿದ್ದೇವೆ’ ಎಂದು ತಿಳಿಸಿದ್ದಾರೆ. “ಸಾಮಾಜಿಕ ಬಹಿಷ್ಕಾರ, ದಂಡ ಸಹಿತ ತಲಾಖ್‌ಗೆ ಸಂಬಂಧಿಸಿ ಕೆಲವು ನಿಯಮಗಳನ್ನು ಆದಷ್ಟು ಬೇಗ ಜಾರಿಗೊಳಿಸುತ್ತೇವೆ. ಶುಕ್ರವಾರ ಮಧ್ಯಾಹ್ನದ ವಿಶೇಷ ನಮಾಜ್‌ ವೇಳೆ ಈ ನಿಯಮಗಳನ್ನು ಓದಿ ಹೇಳುವಂತೆ ಹಾಗೂ ಅವುಗಳ ಅನುಷ್ಠಾನದ ಪ್ರಾಮುಖ್ಯವನ್ನು ಜನರಿಗೆ ತಿಳಿಸುವಂತೆ ದೇಶದ ಎಲ್ಲ ಮಸೀದಿಗಳ ಮೌಲಾನಾಗಳು ಹಾಗೂ ಇಮಾಮ್‌ಗಳಿಗೆ ಸೂಚಿಸಲಾಗುವುದು’ ಎಂದೂ ಅವರು ಹೇಳಿದ್ದಾರೆ.

ತೆಲಂಗಾಣದಲ್ಲಿ ಮುಸ್ಲಿಂ ಮೀಸಲಾತಿ ಶೇ.4ರಿಂದ 12ಕ್ಕೇರಿಕೆ
ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮುಸ್ಲಿಮರಿಗಿದ್ದ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ ಶೇ.12ಕ್ಕೇರಿಸಿ ತೆಲಂಗಾಣ ಸರಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಸಿಎಂ ಕೆ. ಚಂದ್ರಶೇಖರ್‌ ರಾವ್‌ ಅವರು ತಮ್ಮ ಚುನಾವಣಾ ಆಶ್ವಾಸನೆಯನ್ನು ಈಡೇರಿಸಿದ್ದಾರೆ. ರವಿವಾರ ನಡೆದ ತೆಲಂಗಾಣ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮುಸ್ಲಿಮರ ಮೀಸಲಾತಿಯನ್ನು ಶೇ.12ಕ್ಕೇರಿಸುವ ವಿಧೇಯಕವನ್ನು ಅಂಗೀಕರಿಸಲಾಯಿತು. ಜತೆಗೆ ಇದೇ ವಿಧೇಯಕದ ಭಾಗವಾಗಿ ಪರಿಶಿಷ್ಟ ಜನಾಂಗೀಯರ ಕೋಟಾವನ್ನು ಶೇ.6ರಿಂದ 10ಕ್ಕೇರಿಸಲಾಯಿತು. ಆದರೆ ಮೀಸಲಾತಿ ಹೆಚ್ಚಳಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ, ಇದನ್ನು ಕೋಮುರಾಜಕೀಯ ಎಂದು ಬಣ್ಣಿಸಿದೆ. ಜತೆಗೆ ಕಲಾಪಕ್ಕೆ ಅಡ್ಡಿ ಉಂಟುಮಾಡಲು ಯತ್ನಿಸಿದೆ. ಈ ಹಿನ್ನೆಲೆಯಲ್ಲಿ ತೆಲಂಗಾಣ ಅಸೆಂಬ್ಲಿಯಲ್ಲಿರುವ ಎಲ್ಲ ಐವರು ಬಿಜೆಪಿ ಸದಸ್ಯರನ್ನು ಅಮಾನತು ಮಾಡಲಾಗಿದೆ. 

ತಲಾಖ್‌ಗೆ ಒಪ್ಪದ್ದಕ್ಕೆ ಆ್ಯಸಿಡ್‌ ಎರಚಿದರು!
ತ್ರಿವಳಿ ತಲಾಖ್‌ ವಿಚಾರ ಚರ್ಚೆಯಾಗುತ್ತಿರುವ ನಡುವೆಯೇ ಉತ್ತರಪ್ರದೇಶದ ಫಿಲಿಬಿಟ್‌ನಲ್ಲಿ ಮುಸ್ಲಿಂ ಮಹಿಳೆಯೊಬ್ಬಳ ಮೇಲೆ ಆ್ಯಸಿಡ್‌ ದಾಳಿ ನಡೆದಿದೆ. ಫೋನ್‌ ಮೂಲಕ ಪತಿಯು ನೀಡಿದ ತಲಾಖ್‌ ಅನ್ನು ಒಪ್ಪದ್ದಕ್ಕೆ ಅತ್ತೆಯ ಮನೆಯವರು ರೆಹಾನಾ (40) ಎಂಬಾಕೆ ಮೇಲೆ ಆ್ಯಸಿಡ್‌ ಎರಚಿದ್ದಾರೆ. ಬೆನ್ನು ಪೂರ್ತಿ ಸುಟ್ಟ ಗಾಯಗಳಾಗಿದ್ದು, ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 18 ವರ್ಷದ ಹಿಂದೆ ಮತ್ಲಬ್‌ ಎಂಬವರು ರೆಹಾನಾರನ್ನು ಮದುವೆಯಾಗಿದ್ದರು. ಅನಂತರ ದಂಪತಿ ಅಮೆರಿಕಕ್ಕೆ ಹೋಗಿ ನೆಲೆಸಿದ್ದರು. 2011ರಲ್ಲಿ ಭಾರತಕ್ಕೆ ವಾಪಸಾದ ಬಳಿಕ ಮತ್ಲಬ್‌ ಒಬ್ಬರೇ ಅಮೆರಿಕಕ್ಕೆ ತೆರಳಿದ್ದರು. ಇತ್ತೀಚೆಗೆ ಫೋನ್‌ ಮಾಡಿ 3 ಬಾರಿ ತಲಾಖ್‌ ನೀಡಿದ್ದರು. ಇದನ್ನು ವಿರೋಧಿಸಿದ್ದ ರೆಹಾನಾ, ಅತ್ತೆ ಮನೆಯಿಂದ ಹೊರಹೋಗಲು ಒಪ್ಪಿರಲಿಲ್ಲ. ಈ ಕಾರಣಕ್ಕಾಗಿ ಅವರು ರೆಹಾನಾ ಮೇಲೆ ಆ್ಯಸಿಡ್‌ ಎರಚಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಬಾಬ್ರಿ ತೀರ್ಪು ಸ್ವಾಗತಿಸುತ್ತೇವೆ
ಬಾಬರಿ ಮಸೀದಿ ವಿವಾದ ಕುರಿತೂ ಮಾತನಾಡಿದ ರೆಹಮಾನಿ, “ವಿವಾದಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ ತೀರ್ಪನ್ನು ಸ್ವಾಗತಿಸುತ್ತೇವೆ. ಆದರೆ, ನ್ಯಾಯಾಲಯದ ಹೊರಗೆ ಸಂಧಾನ ಮಾತುಕತೆಗೆ ನಮ್ಮ ವಿರೋಧವಿದೆ’ ಎಂದಿದ್ದಾರೆ.

ಕೆಟ್ಟ  ಪಿಡುಗು ನಿರ್ಮೂಲ ಅಗತ್ಯ
ರವಿವಾರ ಬಿಜೆಪಿ ಕಾರ್ಯ ಕಾರಿಣಿಯಲ್ಲಿ ತ್ರಿವಳಿ ತಲಾಖ್‌ ಅನ್ನು ಪ್ರಸ್ತಾವಿಸಿದ ಪ್ರಧಾನಿ ಮೋದಿ, “ಸಾಮಾ ಜಿಕ ಪಿಡುಗುಗಳನ್ನು ಕಂಡೊಡನೆ ಸಮಾಜವು ಎಚ್ಚೆತ್ತು ಸಂತ್ರಸ್ತರಿಗೆ ನ್ಯಾಯ ಒದಗಿಸಲು ಪ್ರಯತ್ನಿಸಬೇಕು. ತ್ರಿವಳಿ ತಲಾಖ್‌ ವಿಚಾರದಲ್ಲಿ ಮುಸ್ಲಿಂ ಸಮುದಾಯ ದೊಳಗೆ ಯಾವುದೇ ಸಂಘರ್ಷ ನಡೆಯಬಾರದು. ಕೆಟ್ಟ ಪಿಡುಗನ್ನು ಸಾಮಾಜಿಕ ಜಾಗೃತಿಯ ರೂಪದಲ್ಲಿ ನಿರ್ಮೂಲನೆ ಮಾಡಬೇಕು. ನಮ್ಮ ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಗಬೇಕು. ಅವರಿಗೆ ಅನ್ಯಾಯ ಆಗಬಾರದು ಹಾಗೂ ಅವರನ್ನು ಯಾರೂ ದೌರ್ಜನ್ಯಕ್ಕೀಡು ಮಾಡಬಾರದು’ ಎಂದರು. ಇದೇ ವೇಳೆ ಮುಸ್ಲಿಮರಲ್ಲಿನ ಹಿಂದುಳಿಯುವಿಕೆ ಕುರಿತೂ ಮಾತನಾಡಿದ ಮೋದಿ, “ಮುಸ್ಲಿಂ ಸಮುದಾಯದಲ್ಲಿ ಹಿಂದುಳಿ ದವರಿದ್ದಾರೆ. ಅವರನ್ನೊಳಗೊಂಡ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದರು. ಹಿಂದುಳಿದ ವರ್ಗಗಳ ಆಯೋಗಕ್ಕೆ ಸಂಬಂಧಿಸಿ ಚರ್ಚೆ ನಡೆಯುತ್ತಿರುವಾಗಲೇ ಮಧ್ಯಪ್ರವೇಶಿಸಿದ ಪ್ರಧಾನಿ ಈ ಮಾತುಗಳನ್ನಾಡಿದ್ದು ವಿಶೇಷ.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.