ರಾಜ್ಯಸಭೆಯಲ್ಲಿ ಕನ್ನಡ ಬಾವುಟ, ರೂಪಾ ವರ್ಗದ್ದೇ ಚರ್ಚೆ
Team Udayavani, Jul 21, 2017, 11:11 AM IST
ನವದೆಹಲಿ: ಕರ್ನಾಟಕ ಸರ್ಕಾರವು ರಾಜ್ಯಕ್ಕೆ ಪ್ರತ್ಯೇಕ ಧ್ವಜ ರೂಪಿಸಲು ಮುಂದಾಗಿರುವುದು, ಡಿಐಜಿ ರೂಪಾ ವರ್ಗಾವಣೆ,
ಗೋರಕ್ಷಣೆ ಹೆಸರಲ್ಲಿ ಹಲ್ಲೆ, ಹತ್ಯೆ ವಿಚಾರಗಳೇ ಗುರುವಾರ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದವು. ಈ ವಿಚಾರಗಳಿಗೆ ಸಂಬಂಧಿಸಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ಭಾರಿ ವಾಗ್ವಾದ ನಡೆಯಿತು. ಇನ್ನು ಲೋಕಸಭೆಯಲ್ಲಿ ರೈತರ ಆತ್ಮಹತ್ಯೆ ಕುರಿತು ಪ್ರತಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿದ ಕಾರಣ, ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.
ರಾಜ್ಯಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, “ಪ್ರಧಾನಿ ಮೋದಿ ಅವರು ಗೋರಕ್ಷಣೆ ಹೆಸರಿನ ಹತ್ಯೆ ಬಗ್ಗೆ ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ. ವಿಎಚ್ಪಿ, ಬಜರಂಗದಳದ ಕಾರ್ಯಕರ್ತರು ಜನರ ಹತ್ಯೆಯಲ್ಲಿ ತೊಡಗಿದ್ದರೆ ಅದನ್ನು ತಡೆಯಲು ಮೋದಿ ಅವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪ್ರಧಾನಿ ಬೆಳಗ್ಗೆ ಒಂದು, ರಾತ್ರಿಯೊಂದು ಮಾತನಾಡುತ್ತಾರೆ. ಮೊದಲು ಇಂತಹ ದ್ವಿಮುಖ ನೀತಿ ನಿಲ್ಲಿಸಲಿ,’ ಎಂದರು. ಜತೆಗೆ, ಪ್ರಸ್ತುತ ಸಮಾಜದಲ್ಲಿ ನೈಜ ಹಿಂದೂ ಮತ್ತು ನಕಲಿ ಹಿಂದೂ
ನಡುವೆ ಹೋರಾಟ ನಡೆಯುತ್ತಿದೆ ಎಂದೂ ಸಿಬಲ್ ಹೇಳಿದರು.
ಇದಕ್ಕೆ ಜೆಡಿಯು ನಾಯಕ ಶರದ್ ಯಾದವ್ ಅವರೂ ಧ್ವನಿಗೂಡಿಸಿದರು. ಈ ವೇಳೆ ಮಾತನಾಡಿದ ಸಚಿವ ಪ್ರಕಾಶ್ ಜಾವಡೇಕರ್, “1984ರಲ್ಲಿ ನಡೆದ ಸಿಖ್ ವಿರೋಧಿ ಗಲಭೆಯು ದೇಶದ ಇತಿಹಾಸದಲ್ಲೇ ಅತಿದೊಡ್ಡ ಲಿಂಚಿಂಗ್(ಗುಂಪಿನ ದಾಳಿ)’ ಎಂದರು. ಈ ನಡುವೆ, ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು, “ಗೋವಿನ ವಿಚಾರದಲ್ಲಿ ವ್ಯಕ್ತಿಗಳನ್ನು ಕೊಲ್ಲುವುದನ್ನು ಒಪ್ಪಲಾಗದು. ತಪ್ಪಿತಸ್ಥರ ವಿರುದ್ಧ ರಾಜ್ಯ ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದರು.
ರೂಪಾ ವರ್ಗಾವಣೆ ಪ್ರಸ್ತಾಪ: ಇದೇ ವೇಳೆ, ಕರ್ನಾಟಕದ ಡಿಐಜಿ ರೂಪಾ ಪ್ರಕರಣವನ್ನು ಪ್ರಸ್ತಾಪಿಸಿದ ಬಿಜೆಪಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಹರಿಹಾಯ್ದಿದ್ದು ಕಂಡುಬಂತು. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, “ಉತ್ತರಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಜಗಳವಾಡಿದ್ದಕ್ಕೆ ಅಲ್ಲಿನ ಮಹಿಳಾ ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಬಿಜೆಪಿಗೆ ಇದನ್ನು ಪ್ರಶ್ನಿಸುವ ನೈತಿಕ ಹಕ್ಕಿಲ್ಲ’ ಎಂದರು.
ಧ್ವಜದ ವಿಚಾರವೇಕೆ ಮಾತಾಡುತ್ತಿಲ್ಲ?: ಚರ್ಚೆಯ ವೇಳೆ ಕನ್ನಡ ಧ್ವಜದ ವಿಚಾರವೆತ್ತಿದ ಬಿಜೆಪಿಯ ಪ್ರಭಾತ್ ಜಾ, “ಕರ್ನಾಟಕ
ಸರ್ಕಾರವು ಪ್ರತ್ಯೇಕ ಧ್ವಜ ರೂಪಿಸಲು ಮುಂದಾಗಿರುವ ಬಗ್ಗೆ ಕಾಂಗ್ರೆಸ್ ಏಕೆ ಮೌನಕ್ಕೆ ಶರಣಾಗಿದೆ’ ಎಂದು ಪ್ರಶ್ನಿಸಿದರು.
ದೇಶವು ಎಲ್ಲರಿಗೆ ಸೇರಿದ್ದು, ಎಲ್ಲರೂ ಸಮಾನ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು’ ಎಂದರು.
ಹಾರಾಟ ನಿರ್ಬಂಧ ಹೇರುವಂತಿಲ್ಲ
ಸಂಸದರೂ ಸೇರಿ ಯಾರ ಮೇಲೂ ವಿಮಾನಯಾನ ಸಂಸ್ಥೆಗಳು ಹಾರಾಟ ನಿರ್ಬಂಧ ಹೇರುವಂತಿಲ್ಲ ಎಂದು ರಾಜ್ಯಸಭೆ ಉಪಸಭಾಧ್ಯಕ್ಷ ಪಿ.ಜೆ.ಕುರಿಯನ್ ಹೇಳಿದ್ದಾರೆ. ಏರ್ಇಂಡಿಯಾ ಸೇರಿ ವಿಮಾನಯಾನ ಸಂಸ್ಥೆಗಳು ಹೇರಿದ್ದ ನಿರ್ಬಂಧದ ಕುರಿತು ಎಸ್ಪಿ ಸದಸ್ಯ ನರೇಶ್ ಅಗರ್ವಾಲ್ ಅವರು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ವಿಮಾನಯಾನ ಸಂಸ್ಥೆಗಳಿಗೆ ಅಂಥದ್ದೊಂದು ಹಕ್ಕಿದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕುರಿಯನ್, “ನೀವು ಸರಿಯಾದ ಪ್ರಶ್ನೆಯನ್ನೇ ಕೇಳಿದ್ದೀರಿ. ಸಂಸದರು ತಪ್ಪು ಮಾಡಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೇ ಹೊರತು, ಹಾರಾಟಕ್ಕೆ ನಿರ್ಬಂಧ ಹೇರುವ ಅಧಿಕಾರ ವೈಮಾನಿಕ ಸಂಸ್ಥೆಗಳಿಗೆ ಇರುವುದಿಲ್ಲ. ಇದನ್ನು ಸರ್ಕಾರ ಗಮನಿಸಲಿ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ