
ತೆರಿಗೆ ವಂಚನೆ: ನಟ ವಿಜಯ್ ಸಹಿತ ಹಲವರಿಗೆ ಸಂಕಟ ; 77 ಕೋಟಿ ರೂ. ವಶ
Team Udayavani, Feb 6, 2020, 10:14 PM IST

ನವದೆಹಲಿ: ತೆರಿಗೆ ವಂಚನೆ ಪ್ರಕರಣ ತಮಿಳು ಚಿತ್ರರಂಗದ ಜನಪ್ರಿಯ ನಟ ವಿಜಯ್ ಅವರಿಗೆ ಸುತ್ತಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ವಿಜಯ್ ಸಹಿತ ತಮಿಳು ಚಿತ್ರರಂಗದ ಓರ್ವ ನಿರ್ಮಾಪಕ, ವಿತರಕ ಮತ್ತು ಫೈನಾನ್ಷಿಯರ್ ಈ ತೆರಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆದಾಯ ತೆರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಇದುವರೆಗೆ ಒಟ್ಟಾರೆಯಾಗಿ 77 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿಯನ್ನೂ ಸಹ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನೀಡಿದ್ದಾರೆ.
ಫೈನಾನ್ಷಿಯರ್ ಅವರಿಗೆ ಸೇರಿರುವ ಚೆನ್ನೈ ಮತ್ತು ಮಧುರೈನಲ್ಲಿರುವ ಗುಪ್ತ ಸ್ಥಳಗಳಲ್ಲಿ ಲೆಕ್ಕಕ್ಕೆ ಸಿಗದ ನಗದು ಪತ್ತೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಇಂದು ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಿದೆ.
ಮತ್ತು ಈ ಪ್ರಕರಣದಲ್ಲಿ ಕೇಳಿಬಂದಿರುವ ನಟನ ಹೆಸರು ವಿಜಯ್ ಅವರದ್ದೇ ಆಗಿದೆ ಎಂದು ಹೆಸರು ಬಹಿರಂಗಪಡಿಸಲು ನಿರಾಕರಿಸಿರುವ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಲೈವ್ ಮಿಂಟ್ ವೆಬ್ ಸೈಟ್ ಗೆ ಮಾಹಿತಿ ನೀಡಿದ್ದಾರೆ. ಆದರೆ ನಟ ವಿಜಯ್ ಅವರಿಗೆ ಸಂಬಂಧಿಸಿದ ಯಾರೊಬ್ಬರೂ ಈ ವಿಷಯದ ಕುರಿತಾಗಿ ಪ್ರತಿಕ್ರಿಯಿಸಲು ಲಭ್ಯರಾಗಿಲ್ಲ ಎಂದು ವೆಬ್ ಸೈಟ್ ತಿಳಿಸಿದೆ.
ನಟ ವಿಜಯ್ ಅವರಿಗೆ ಸೇರಿರುವ ಚರಾಸ್ತಿಗಳು ಮತ್ತು ನಿರ್ಮಾಪಕರಿಂದ ಅವರು ಪಡೆದುಕೊಂಡಿರುವ ಸಂಭಾವನೆಗಳನ್ನು ತನಿಖೆಗೊಳಪಡಿಸಲಾಗುತ್ತಿದೆ ಎಂದು ಸಿಬಿಡಿಟಿ ಹೇಳಿಕೆ ಖಚಿತಪಡಿಸಿದೆ.
ಈ ದಾಳಿಯ ಸಂದರ್ಭದಲ್ಲಿ ಚೆನ್ನೈ ಹಾಗೂ ಮಧುರೈಗಳನ್ನು ಕೇಂದ್ರವಾಗಿರಿಸಿಕೊಂಡು ಸುತ್ತಮುತ್ತ ಒಟ್ಟು 38 ಕಡೆಗಳಲ್ಲಿ ಪತ್ತೆಕಾರ್ಯಗಳನ್ನು ನಡೆಸಲಾಗಿದೆ. ಮತ್ತು ಈ ತಪಾಸಣಾ ಕಾರ್ಯ ಇನ್ನೂ ನಡೆಯುತ್ತಿದೆ ಎಂದು ಇಲಾಖೆಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

180 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಢಿಕ್ಕಿ ಲಕ್ನೋದಲ್ಲಿ ತುರ್ತು ಭೂಸ್ಪರ್ಶ

ಒಡಿಶಾ ಆರೋಗ್ಯ ಸಚಿವರ ಮೇಲೆ ಗುಂಡಿನ ದಾಳಿ; ಎದೆಗೆ ಗುರಿಯಿಟ್ಟ ದುಷ್ಕರ್ಮಿಗಳು

ದೆಹಲಿಯಲ್ಲಿ ಖಲಿಸ್ತಾನಿ ಸ್ಲೀಪರ್ ಸೆಲ್ ಗಳು ಸಕ್ರಿಯ; ದೊಡ್ಡ ದಾಳಿಯ ಬಗ್ಗೆ ಗುಪ್ತಚರ ವರದಿ

ದೇಶದಲ್ಲಿ ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ: ಪ್ರಧಾನಿ ಮೋದಿ

ಬಿಹಾರದಲ್ಲಿ ಮದ್ಯ ನಿಷೇಧವನ್ನು ಹಿಂಪಡೆಯಲೇಬೇಕು, ಯಾಕೆಂದರೆ.. : ಮಾಜಿ ಸಿಎಂ ಮಾಂಝಿ ಬೇಡಿಕೆ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

‘ಕೌಸ್ತುಭ ರೆಸಿಡೆನ್ಸಿ’ ಹೊಟೇಲ್, ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಬಿಜೆಪಿ ತೊರೆದು ಜೆಡಿಎಸ್ ಸೇರಿದ ಚಳ್ಳಕೆರೆ ಮಾಜಿ ಶಾಸಕ

ಕಾಶ್ಮೀರ ಕುರಿತ ಹೇಳಿಕೆ; ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ವಿವೇಕ್ ಅಗ್ನಿಹೋತ್ರಿ

ಬಳ್ಳಾರಿಯಲ್ಲಿ ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!!

180 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಢಿಕ್ಕಿ ಲಕ್ನೋದಲ್ಲಿ ತುರ್ತು ಭೂಸ್ಪರ್ಶ