ಕಾವೇರಿ ಹೋರಾಟಕ್ಕೆ ತಲೈವಾ


Team Udayavani, Apr 9, 2018, 7:05 AM IST

Rajani-8-4.jpg

ಚೆನ್ನೈ: ‘ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಿರುವಾಗ ಚೆನ್ನೈನಲ್ಲಿ ಐಪಿಎಲ್‌ ಪಂದ್ಯ ನಡೆಯುವುದು ಮುಜುಗರ ತರುವ ವಿಚಾರ.’ ಹೀಗೆಂದು ಹೇಳಿರುವುದು ಇತ್ತೀಚೆಗಷ್ಟೇ ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿರುವ ಸೂಪರ್‌ ಸ್ಟಾರ್‌ ರಜನಿಕಾಂತ್‌. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳು ಚಿತ್ರರಂಗ ಭಾನುವಾರ ಪ್ರತಿಭಟನೆಗೆ ಇಳಿದಿದ್ದು, ಅದರಲ್ಲಿ ಪಾಲ್ಗೊಂಡಿದ್ದ ತಲೈವಾ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಜನರು ತೊಂದರೆಯಲ್ಲಿರುವಂಥ ಈ ಸಂದರ್ಭದಲ್ಲಿ ಐಪಿಲ್‌ ಕ್ರಿಕೆಟ್‌ ಬಗ್ಗೆ ಯೋಚನೆ ಮಾಡುವಂತೆಯೂ ಇಲ್ಲ. ಪ್ರತಿಭಟನಾ ಸೂಚಕವಾಗಿ ಆಟಗಾರರು ಹಾಗೂ ವೀಕ್ಷಕರು ಕಪ್ಪುಪಟ್ಟಿ ಧರಿಸಿಕೊಳ್ಳಬೇಕು ಎಂದೂ ಅವರು ಮನವಿ ಮಾಡಿದ್ದಾರೆ. 

ಚೆನ್ನೈನ ವಲ್ಲುವರ್‌ಕೋಟ್ಟಮ್‌ನಲ್ಲಿ ತಮಿಳು ಚಿತ್ರರಂಗ ಮತ್ತು ಇತರ ಸಂಘಟನೆಗಳು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸುವುದಕ್ಕೆ ಮುನ್ನ ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ‘ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಏಕಕಂಠದಿಂದ ತಮಿಳುನಾಡು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ. ಸಾಮಾನ್ಯ ಜನರು ನೀರಿಗಾಗಿ ಮೊರೆ ಇಡುತ್ತಿರುವಾಗ ಐಪಿಎಲ್‌ ಕ್ರಿಕೆಟ್‌ ಎಂದು ಸಂಭ್ರಮಿಸುವುದು ಸರಿಯಲ್ಲ. ಹೀಗಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಆಟಗಾರರು ಕಪ್ಪು ಟಿ ಶರ್ಟ್‌ ಧರಿಸಿ ಆಡಬೇಕು’ ಎಂದಿದ್ದಾರೆ.


ಕಾವೇರಿ ಮಂಡಳಿ ಪರವಾಗಿ ಹೋರಾಟ ಮಾಡಿದರೆ ಕರ್ನಾಟಕದಲ್ಲಿ ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ರ ಸಿನಿಮಾಗಳಿಗೆ ಲಭಿಸುವ ಆದಾಯಕ್ಕೆ ಖೋತಾವಾದೀತೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಸರಿಯಾದ ಕಾರಣಕ್ಕೇ ಹೋರಾಟ ಮಾಡುತ್ತಿದ್ದೇನೆ’ ಎಂದು ಹೇಳಿದ್ದಾರೆ. ಬಳಿಕ ಅವರು ಚಿತ್ರರಂಗ ಆಯೋಜಿಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಅದರಲ್ಲಿ ಮಕ್ಕಳ್‌ ನೀಧಿ ಮಯ್ಯಂ ಮುಖ್ಯಸ್ಥ ಕಮಲ್‌ ಹಾಸನ್‌ ಸೇರಿದಂತೆ ತಮಿಳು ನಟ-ನಟಿಯರು ಭಾಗವಹಿಸಿದ್ದರು. ಇಲ್ಲಿ ಮಾತನಾಡಿದ ರಜನಿ, ‘ಕಾವೇರಿ ನಿರ್ವಹಣಾ ಮಂಡಳಿ ತಮಿಳುನಾಡಿನ ಪ್ರತಿಯೊಬ್ಬನ ಆಶಯ. ಹೀಗಾಗಿ ಕೇಂದ್ರ ಸರಕಾರ‌ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯದ ಪ್ರತಿಯೊಬ್ಬನ ಆಕ್ರೋಶವನ್ನು ಕೇಂದ್ರ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ. 

ಎಲ್ಲರದ್ದೂ ಪ್ರತಿಭಟನೆ: ತಮಿಳುನಾಡಿನ ರೈತರ ಹಿತರಕ್ಷಣೆಗಾಗಿ ಪ್ರತಿಯೊಬ್ಬರೂ ಹೋರಾಟ ನಡೆಸುತ್ತಿದ್ದಾರೆ. ನಾವು ಯಾರೂ ಶ್ರೀಮಂತ ರೈತರ ಹಿತರಕ್ಷಣೆಗಾಗಿ ಹೋರಾಡುತ್ತಿಲ್ಲ. ಕೃಷಿ ಉತ್ಪನ್ನಗಳನ್ನು ಬೆಳೆದು ಮಾರಾಟ ಮಾಡಿ ಅದರಿಂದ ಜೀವನ ಕಂಡುಕೊಳ್ಳುವವರ ಪರವಾಗಿ ಈ ಹೋರಾಟ ನಡೆಸಲಾಗುತ್ತಿದೆ ಎಂದು ರಜನಿ ಪ್ರತಿಪಾದಿಸಿದ್ದಾರೆ. ಕರ್ನಾಟಕದಲ್ಲಿರುವ ರಾಜಕಾರಣಿಗಳೂ ರೈತರ ಪರವಾಗಿ ಮಾತನಾಡುತ್ತಿಲ್ಲ. ಅದು ಅಲ್ಲಿನ ರೈತರಿಗೂ ತಿಳಿದಿದೆ. ಆ ವಿಚಾರವೇ ನಮ್ಮ ಪ್ರತಿಭಟನೆಗೆ ಶಕ್ತಿ ತುಂಬಲಿದೆ ಎಂದರು. 

ಕಮಲ್‌ ವೈರಿಯಲ್ಲ
ರಜನಿಕಾಂತ್‌ ಅನುಸರಿಸಲು ಉದ್ದೇಶಿಸಿದ ‘ಆಧ್ಯಾತ್ಮಿಕ ರಾಜಕೀಯಕ್ಕೆ’ (ಸ್ಪಿರಿಚ್ಯುವಲ್‌ ಪಾಲಿಟಿಕ್ಸ್‌) ಕಮಲ್‌ ಹಾಸನ್‌ ಆಕ್ಷೇಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ತಲೈವಾ, ಅವರು ನನ್ನ ವೈರಿಯಲ್ಲ. ಬಡತನ, ಭ್ರಷ್ಟಾಚಾರ, ನಿರುದ್ಯೋಗ, ಬಡವರ ಮತ್ತು ರೈತರ ಕಣ್ಣೀರು ನನ್ನ ವೈರಿಗಳು ಎಂದಿದ್ದಾರೆ.

ದಿಲ್ಲಿಯಲ್ಲಿ ಪ್ರತಿಭಟನೆ
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗಾಗಿ ತಮಿಳುನಾಡಿನಿಂದ ನವದೆಹಲಿಗೆ ಬಂದಿದ್ದ ಯುವಕರ ತಂಡ ರಾಜೀವ್‌ ಚೌಕ್‌ ಮೆಟ್ರೋ ಸ್ಟೇಷನ್‌ ಬಳಿ ಪ್ರತಿಭಟನೆ ನಡೆಸಿತು. ಕರ್ನಾಟಕದ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ಮಂಡಳಿ ರಚನೆ ವಿಳಂಬ ಮಾಡಲಾಗುತ್ತಿದೆ ಎಂದು ಕೇಂದ್ರ ಸರಕಾರದ ನಿಲುವನ್ನು ಆಕ್ಷೇಪಿಸಿತು. ಸೋಮವಾರ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ.

ಸೂರಪ್ಪ ನೇಮಕಕ್ಕೆ ಆಕ್ಷೇಪ
ಅಣ್ಣಾ ವಿಶ್ವವಿದ್ಯಾನಿಲಯಕ್ಕೆ ಕನ್ನಡಿಗ ಡಾ.ಎಂ.ಕೆ.ಸೂರಪ್ಪ ಅವರನ್ನು ಕುಲಪತಿಯಾಗಿ ನೇಮಿಸಿದ್ದಕ್ಕೂ ರಜನಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಸ್ವೀಕಾರಾರ್ಹವಲ್ಲ. ಇಂಥ ಸಂದರ್ಭಗಳಲ್ಲಿ ಕರ್ನಾಟಕ ಮೂಲದ ವ್ಯಕ್ತಿಯನ್ನು ಕುಲಪತಿಯನ್ನಾಗಿ ನೇಮಿಸಿರುವುದು ಸರಿಯಲ್ಲ. ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಸಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.